ಮುಂಬೈ: ಬೆಳಗಿನ ತಂಪು ವಾತಾವರಣದಲ್ಲಿ ವಾಕಿಂಗ್ ಹೊರಟಿದ್ದ ಮಹಿಳೆಯ ಮೇಲೆ ತೆಂಗಿನ ಮರ ಅಪ್ಪಳಿಸಿದ ಪರಿಣಾಮ ತಲೆಗೆ ಬಲವಾದ ಪೆಟ್ಟಾಗಿ ಸಾವಿಗೀಡಾಗಿದ್ದಾರೆ.
ಇಡೀ ಮರವೇ ಉರುಳಿದ್ದರಿಂದ ತಲೆಗೆ ಆದ ಪೆಟ್ಟು ಸಾವಿನೊಂದಿಗೆ ಅಂತ್ಯಕಂಡಿದೆ. ಅಧಿಕ ಪ್ರಮಾಣದಲ್ಲಿ ರಕ್ತಸ್ರಾವವಾಗಿದ್ದು, ಶನಿವಾರ ಬೆಳಿಗ್ಗೆ ಮಹಿಳೆ ಮೃತಪಟ್ಟಿದ್ದಾಗಿ ವರದಿಯಾಗಿದೆ.
ಟಿವಿ ವಾಹಿನಿಯ ಮಾಜಿ ನಿರೂಪಕಿ ಕಾಂಚನಾ ಶುಕ್ರವಾರ ಮುಂಬೈನ ಚೆಂಬೂರ್ನಲ್ಲಿ ವಾಕಿಂಗ್ ಮಾಡುತ್ತಿದ್ದಾಗ ಸಂಭವಿಸಿದ ದುರ್ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಸ್ವಸ್ತಿಕ್ ಉದ್ಯಾನದ ಸಮೀಪ ಈ ಘಟನೆ ನಡೆದಿದ್ದು, ತೆಂಗಿನ ಮರದಡಿ ಸಿಲುಕಿದ ಕಾಂಚನಾ ಅವರನ್ನು ಸ್ಥಳೀಯರು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಯಶಸ್ವಿಯಾಗದೆ ಮೃತಪಟ್ಟಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.