ADVERTISEMENT

ವಾಧ್ರಾ ವಿರುದ್ಧ ಅರ್ಜಿ ವಿಚಾರಣೆಗೆ ಸಮ್ಮತಿ

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2014, 19:30 IST
Last Updated 30 ಏಪ್ರಿಲ್ 2014, 19:30 IST

ನವದೆಹಲಿ (ಐಎಎನ್‍ಎಸ್‍): ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್‌ ವಾಧ್ರಾ ಭಾಗಿಯಾಗಿದ್ದಾರೆ ಎನ್ನ­ಲಾದ ಭೂಹಗರಣಗಳು ಸೇರಿದಂತೆ ಹರಿಯಾ­ಣಾ­ದಲ್ಲಿ ರಿಯಲ್‌ ಎಸ್ಟೇಟ್‌ ಉದ್ಯಮಿಗಳಿಗೆ ನೀಡ­ಲಾದ ಪರವಾನಗಿಗಳನ್ನು ಪ್ರಶ್ನಿಸಿ ಸಲ್ಲಿಸ­ಲಾದ ಅರ್ಜಿಗಳನ್ನು ಚುನಾವಣೆ ನಂತರ ವಿಚಾ­ರಣೆ ನಡೆಸುವುದಾಗಿ ದೆಹಲಿ ಹೈಕೋರ್ಟ್‌ ತಿಳಿಸಿದೆ.

ಈ ಹಗರಣಗಳ ಕುರಿತು ಸಿಬಿಐ ತನಿಖೆ ನಡೆಸುವಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ಎಂ. ಎಲ್‌. ಶರ್ಮಾ, ಚುನಾವಣೆ ನಂತರವಷ್ಟೇ ಅರ್ಜಿ ವಿಚಾರಣೆ ಆರಂಭಿಸಬೇಕು. ಇಲ್ಲದಿದ್ದಲ್ಲಿ ಅದು ಬಿಜೆಪಿ ಅಥವಾ ಕಾಂಗ್ರೆಸ್‌ಗೆ ಲಾಭ ಮಾಡಿಕೊಡುವ ಸಾಧ್ಯತೆ ಇದೆ ಎಂದರು. ಅವರ ಮನವಿ ಪುರಸ್ಕರಿಸಿದ ಕೋರ್ಟ್‌ ಮೇ 13ಕ್ಕೆ ವಿಚಾರಣೆ ನಿಗದಿಪಡಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.