ಹೈದರಾಬಾದ್(ಐಎಎನ್ ಎಸ್): ವಿಜಯವಾಡ ಆಂಧ್ರ ಪ್ರದೇಶದ ನೂತನ ರಾಜಧಾನಿ ಎಂದು ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಗುರುವಾರ ಘೋಷಣೆ ಮಾಡಿದರು.
ವಿಜಯವಾಡ ಭೌಗೋಳಿಕವಾಗಿ ಆಂಧ್ರ ಪ್ರದೇಶದ ಮಧ್ಯ ಭಾಗದಲ್ಲಿದೆ. ಈ ಕುರಿತು ಶಾಸಕಾಂಗ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ವಿಜಯವಾಡವನ್ನು ನೂತನ ರಾಜಧಾನಿಯನ್ನಾಗಿ ಮಾಡಲು ಸೆ. 1ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು ಎಂದು ಅವರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.