ನವದೆಹಲಿ (ಪಿಟಿಐ): ಅಸ್ಸಾಂ ಮುಖ್ಯಮಂತ್ರಿ ಸ್ಥಾನದಿಂದ ತರುಣ್ ಗೊಗೋಯ್ ಅವರನ್ನು ಕೆಳಗಿಳಿಸಬೇಕು ಎಂಬ ಒತ್ತಾಯ ಹೆಚ್ಚುತ್ತಿರುವುದರಿಂದ ಪರಿಸ್ಥಿತಿಯ ಅವಲೋಕನಕ್ಕೆ ಕಾಂಗ್ರೆಸ್ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ ಅಸ್ಸಾಂಗೆ ತೆರಳಲಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಅಸ್ಸಾಂನಲ್ಲಿ ಪಕ್ಷದ ಹೀನಾಯ ಸೋಲಿನಿಂದಾಗಿ ಗೊಗೋಯ್ ರಾಜೀನಾಮೆ ನೀಡಬೇಕು ಎಂಬ ಬೇಡಿಕೆ ಕೇಳಿ ಬಂದಿದೆ. ಖರ್ಗೆ ಅವರು ಕಾಂಗ್ರೆಸ್ ಶಾಸಕರು ಮತ್ತು ರಾಜ್ಯ ಕಾಂಗ್ರೆಸ್ ಪದಾಧಿಕಾರಿಗಳನ್ನು ಭೇಟಿಯಾಗಿ ಅವರ ಅಭಿಪ್ರಾಯ ಸಂಗ್ರಹಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.