ನೋಯ್ಡಾ: ಇಲ್ಲಿನ ಶತಾಬ್ದಿ ರೈಲ್ ವಿಹಾರ್ ಅಪಾರ್ಟ್ಮೆಂಟ್ ವಲಯದಲ್ಲಿ ಬಿ.ಟೆಕ್ ಎಂಜಿನಿಯರ್ನನ್ನು ಅಟ್ಟಾಡಿಸಿಕೊಂಡು ಗುಂಡಿಕ್ಕಿ ಕೊಂದಿರುವ ಘಟನೆ ಮಂಗಳವಾರ ರಾತ್ರಿ ನಡೆದಿದ್ದು, ಅಪಾರ್ಟ್ಮೆಂಟ್ನ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮೊಬೈಲ್ ತಯಾರಕ ಕಂಪೆನಿಯಾದ ಲಾವಾದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಅಂಜಲಿ ಎಂಬಾಕೆ ನಾಲ್ಕೈದು ತಿಂಗಳಿಂದ ನೋಯ್ಡಾದ ಅಪಾರ್ಟ್ಮೆಂಟ್ನಲ್ಲಿ ವಾಸವಿದ್ದರು.
ಅಂಜಲಿ ಕೆಲಸ ಮುಗಿಸಿ ಮನೆಗೆ ಬಂದಿದ್ದಾಳೆ. ಆಗ ದುಷ್ಕರ್ಮಿಯೊಬ್ಬ ಆಕೆಯನ್ನು ನೆಲಮಾಳಿಗೆಯಲ್ಲಿ ಕೊಲ್ಲಲು ಪ್ರಯತ್ನಿಸಿದ್ದಾನೆ. ತಪ್ಪಿಸಿಕೊಳ್ಳಲು ಯತ್ನಿಸಿದ ಯುವತಿ ಹಿಂದೆ ಓಡಿ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಆದರೂ ಭದ್ರತಾ ಸಿಬ್ಬಂದಿ ಹಾಗೂ ಅಪಾರ್ಟ್ಮೆಂಟ್ನಲ್ಲಿ ವಾಸವಿದ್ದ ಮಂದಿಗೆ ಕೊಲೆಯಾಗಿರುವ ಬಗ್ಗೆ ತಿಳಿದಿಲ್ಲ!
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ರಾಜ್ಯದಲ್ಲಿ ನೀತಿ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಶ್ರಮಿಸುತ್ತಿದ್ದಾರೆ. ಈ ಬಗ್ಗೆ ಪೊಲೀಸರು ತನಿಖೆ ಕೈಗೊಂಡು ಅಪರಾಧಿಯನ್ನು ಶೀಘ್ರವೇ ಪತ್ತೆಹಚ್ಚಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉತ್ತರಪ್ರದೇಶ ಸಚಿವ ಶ್ರೀಕಾಂತ್ ಶರ್ಮಾ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.