ಮುಂಬೈ (ಪಿಟಿಐ): ಶಕ್ತಿ ಮಿಲ್ಸ್ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಮೂವರು ಅಪರಾಧಿಗಳಿಗೆ ವಿಧಿಸಲಾಗಿರುವ ಮರಣದಂಡನೆಯನ್ನು ದೃಢೀಕರಿಸುವಂತೆ ಕೋರಿ ಬಾಂಬೆ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದೆ.
ಕಾನೂನಿನ ಪ್ರಕಾರ, ವಿಚಾರಣಾ ನ್ಯಾಯಾಲಯ ವಿಧಿಸಿರುವ ಗಲ್ಲು ಶಿಕ್ಷೆಯನ್ನು ಹೈಕೋರ್ಟ್ ದೃಢಪಡಿಸಬೇಕು. ರಾಜ್ಯ ಸರ್ಕಾರವು ಏಪ್ರಿಲ್ 15ರಂದು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದು, ಶೀಘ್ರದಲ್ಲಿ ವಿಚಾರಣೆಗೆ ಬರಲಿದೆ. ಮರಣದಂಡನೆಗೆ ಗುರಿಯಾಗಿರುವ ಅಪರಾಧಿಗಳು ಇನ್ನಷ್ಟೇ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಬೇಕಾಗಿದೆ.
ಮುಂಬೈನ ಪಾಳುಬಿದ್ದಿರುವ ಶಕ್ತಿ ಮಿಲ್ಸ್ ಆವರಣದಲ್ಲಿ ಪತ್ರಿಕಾ ಛಾಯಾಗ್ರಹಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಮಾಡಿದ ಪ್ರಕರಣದಲ್ಲಿ ಸೆಷನ್ಸ್ ನ್ಯಾಯಾಲಯವು ವಿಜಯ್ ಜಾಧವ್ (19), ಮೊಹಮ್ಮದ್ ಖಾಸಿಮ್ ಬೆಂಗಾಳಿ (21), ಮೊಹಮ್ಮದ್ ಸಲೀಮ್ ಅನ್ಸಾರಿ (28) ಅವರಿಗೆ ಏಪ್ರಿಲ್ 4ರಂದು ಮರಣದಂಡನೆ ಹಾಗೂ ಮತ್ತೊಬ್ಬ ಅಪರಾಧಿ ಸಿರಾಜ್ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.