ಶಿಮ್ಲಾ: ಹಿಂದೂಸ್ತಾನ–ಟಿಬೆಟ್ ರಾಷ್ಟ್ರೀಯ ಹೆದ್ದಾರಿ ಬಳಿ ಇರುವ ರಾಮ್ಪುರ ವಲಯದಲ್ಲಿ 700 ಮೀಟರ್ ಆಳದ ಕಣಿವೆಗೆ ಬಸ್ ಉರುಳಿ ಬಿದ್ದಿದ್ದು, ದುರಂತದಲ್ಲಿ 28 ಮಂದಿ ಮೃತಪಟ್ಟಿದ್ದಾರೆ.
‘ದುರಂತದಲ್ಲಿ ಗಾಯಗೊಂಡವರನ್ನು ಖಾನೇರಿಯಲ್ಲಿರುವ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಶಿಮ್ಲಾ ಜಿಲ್ಲಾಧಿಕಾರಿ ರೋಹನ್ ಚಂದ್ ಠಾಕೂರ್ ಹೇಳಿದ್ದಾರೆ.
‘ಘಟನಾ ಸ್ಥಳಕ್ಕೆ ದೌಡಾಯಿಸಿದ ರಾಷ್ಟ್ರೀಯ ವಿಪತ್ತು ನಿಗ್ರಹ ಪಡೆ ಮೇಲಧಿಕಾರಿಗಳ ಉಸ್ತುವಾರಿಯಲ್ಲಿ ಉಳಿದ ಪ್ರಯಾಣಿಕರ ರಕ್ಷಣಾ ಕಾರ್ಯಾಚರಣೆ ನಡೆದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.