ನವದೆಹಲಿ: ಬೆಂಗಳೂರಿನ ಮೇಯರ್ ಜಿ.ಪದ್ಮಾವತಿ ನೇತೃತ್ವದಲ್ಲಿ ಇಲ್ಲಿಗೆ ಬಂದಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 37ಕ್ಕೂ ಅಧಿಕ ಕಾಂಗ್ರೆಸ್ ಸದಸ್ಯರ ನಿಯೋಗವು, ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಗುರುವಾರ ಸಂಜೆ ಭೇಟಿ ಮಾಡಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸುವಂತೆ ಮನವಿ ಸಲ್ಲಿಸಿದೆ.
ಪಕ್ಷದ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಶುಭ ಕೋರಿದ ತಂಡವು, ಅವರ ಜೊತೆಗೇ ರಾಹುಲ್ ಗಾಂಧಿ ಅವರ ಬಳಿ ತೆರಳಿ ಮನವಿ ಮಾಡಿಕೊಂಡಿದೆ.