ರಾಳೆಗಣಸಿದ್ದಿ (ಪಿಟಿಐ): ಪ್ರಸ್ತುತ ಲೋಕಪಾಲ ಮಸೂದೆ ಇಲಿಯನ್ನು ಕೂಡ ಜೈಲಿಗೆ ಕಳುಹಿಸುವ ಸಾಮರ್ಥ್ಯ ಹೊಂದಿಲ್ಲ ಎಂಬ ಅರವಿಂದ್ ಕೇಜ್ರಿವಾಲ್ ಟೀಕೆಗೆ ಅಣ್ಣಾ ಹಜಾರೆ ತಿರುಗೇಟು ನೀಡಿದ್ದಾರೆ.
‘ನೀವು ಇಲಿಯ ಬಗ್ಗೆ ಮಾತನಾಡುತ್ತಿದ್ದೀರಿ. ಆದರೆ ಈ ಮಸೂದೆ ಸಿಂಹವನ್ನು ಕೂಡ ಬಲೆಗೆ ಕೆಡಹುವ ಶಕ್ತಿ ಹೊಂದಿದೆ’ ಎಂದು ಅವರು ಹೇಳಿದ್ದಾರೆ. ತಿದ್ದುಪಡಿ ನಂತರ ರಾಜ್ಯಸಭೆಯಲ್ಲಿ ಮಂಡನೆಯಾಗಿರುವ ಮಸೂದೆಯನ್ನು ಹಜಾರೆ ಶ್ಲಾಘಿಸಿದ್ದಾರೆ.
ಮಸೂದೆಯನ್ನು ಬೆಂಬಲಿಸುವಂತೆ, ಸಮಾಜವಾದಿ ಪಕ್ಷವವನ್ನು ಹಜಾರೆ ವಿನಂತಿಸಿಕೊಂಡಿದ್ದಾರೆ. ಜನ ಲೋಕಪಾಲ್ ಮಸೂದೆ ಜಾರಿಗೆ ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ನಡೆಸುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ 7ನೇ ದಿನಕ್ಕೆ ಕಾಲಿಟ್ಟಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.