ADVERTISEMENT

ಶೀಘ್ರದಲ್ಲೇ ರಾಹುಲ್‌ ಪಾದಯಾತ್ರೆ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2015, 10:33 IST
Last Updated 27 ಏಪ್ರಿಲ್ 2015, 10:33 IST

ನವದೆಹಲಿ (ಪಿಟಿಐ): ಕೇಂದ್ರ ಸರ್ಕಾರದ ಭೂಸ್ವಾಧೀನ ತಿದ್ದುಪಡಿ ಮಸೂದೆ ವಿರೋಧಿಸಿ ಕಾಂಗ್ರೆಸ್‌ ಉಪಾಧ್ಯಕ್ಷ ರಾಹುಲ್‌ ಗಾಂಧಿ ಶೀಘ್ರದಲ್ಲೇ ರೈತರ ಪಾದಯಾತ್ರೆ ನಡೆಸಲಿದ್ದಾರೆ. ಇತ್ತೀಚೆಗಷ್ಟೇ ರಾಹುಲ್‌  ದೆಹಲಿಯಲ್ಲಿ ರೈತರ ಸಮಾವೇಶ ನಡೆಸಿ ಗಮನ ಸೆಳೆದಿದ್ದರು.

ರೈತರ ಆತ್ಮಹತ್ಯೆ ಪ್ರಕರಣಗಳಿಂದ ಹೆಚ್ಚಾಗಿ ಸುದ್ದಿಯಲ್ಲಿರುವ   ಮಹಾರಾಷ್ಟ್ರದ ವಿದರ್ಭ  ಅಥವಾ ತೆಲಂಗಾಣದ ಮೆದಕ್‌ ಜಿಲ್ಲೆಯಿಂದ  ಪಾದಯಾತ್ರೆ ಕೈಗೊಳ್ಳಬಹುದು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಪಾದಯಾತ್ರೆಯ ಭಾಗವಾಗಿ  ಉತ್ತರಪ್ರದೇಶ, ಆಂಧ್ರಪ್ರದೇಶ, ರಾಜಸ್ತಾನ್‌, ಮಧ್ಯಪ್ರದೇಶ, ಪಂಜಾಬ್‌ ಹಾಗೂ ತೆಲಂಗಾಣಕ್ಕೆ ಭೇಟಿ ನೀಡಲಿರುವ ರಾಹುಲ್‌, ಸಂಕಷ್ಟಕ್ಕೆ ಸಿಲುಕಿರುವ ರೈತರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.

ಪಾದಯಾತ್ರೆಗೆ ಸಂಬಂಧಿಸಿದ ರಾಹುಲ್‌ ಅವರ ಕಾರ್ಯಕ್ರಮಗಳ ಪಟ್ಟಿಯನ್ನು ಇನ್ನೇನು ಅಂತಿಮಗೊಳಿಸಬೇಕಿದೆ ಎಂದು ಎಐಸಿಸಿಯ ಮಾಧ್ಯಮ ವಿಭಾಗದ ಮೇಲ್ವಿಚಾರಕ ರಣ್‌ದೀಪ್‌ ಸರ್ಜಿವಾಲಾ ತಿಳಿಸಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT