ನವದೆಹಲಿ: ಸಂಸದೀಯ ವ್ಯವಹಾರಗಳ ಸಚಿವ ಸಂಪುಟ ಸಮಿತಿ (ಸಿಸಿಪಿಎ) ಮುಂದಿರುವ ಪ್ರಸ್ತಾವನೆ ಪ್ರಕಾರ ಸಂಸತ್ನ ಮುಂಗಾರು ಅಧಿವೇಶನ ಜುಲೈ 12ರಿಂದ ಆರಂಭವಾಗುವ ಸಾಧ್ಯತೆ ಇದೆ. ಆಗಸ್ಟ್ 11ರಂದು ಅಧಿವೇಶನ ಮುಕ್ತಾಯವಾಗಲಿದೆ.
ಗೃಹ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಸಚಿವ ಸಂಪುಟ ಸಮಿತಿ ಜೂನ್ 20ರ ನಂತರ ಅಧಿವೇಶನದ ದಿನಾಂಕದ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.
ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ಈ ಬಾರಿ ಅವಧಿಗಿಂತಲೂ ಮುಚಿತವಾಗಿ ಅಧಿವೇಶನ ಆರಂಭಗೊಳ್ಳುವ ಸಾಧ್ಯತೆ ಇದೆ ಎಂದೂ ಮೂಲಗಳು ಹೇಳಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.