ನವದೆಹಲಿ (ಪಿಟಿಐ): ಇತ್ತೀಚೆಗೆ ಮಧುಮೇಹ ನಿಯಂತ್ರಣ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಹಣಕಾಸು ಸಚಿವ ಜೇಟ್ಲಿ ಅವರು ಆರೋಗ್ಯ ತಪಾಸಣೆಗಾಗಿ ಸೋಮವಾರ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅವರ ಕುಟುಂಬ ವೈದ್ಯರು ತಿಳಿಸಿದ್ದಾರೆ.
‘ಸಚಿವರು ಕ್ಷೇಮವಾಗಿದ್ದಾರೆ. ಅವರ ಆರೋಗ್ಯದ ಮೇಲೆ ವೈದ್ಯರು ನಿಗಾವಹಿಸಿದ್ದಾರೆ’ ಎಂದು ಮೂಲಗಳು ತಿಳಿಸಿವೆ.
‘ಮೂತ್ರಪಿಂಡದ ಕಾರ್ಯನಿರ್ವಹಣೆ ತಪಾಸಣೆಗಾಗಿ ಜೇಟ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ’ ಎಂದು ಡಾ. ಪ್ರದೀಪ ಕೆ ಚೌಬೆ ತಿಳಿಸಿದ್ದಾರೆ.
ಅನಾರೋಗ್ಯದಿಂದಾಗಿ ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಜಿ–20 ರಾಷ್ಟ್ರಗಳ ಹಣಕಾಸು ಸಚಿವರ ಸಭೆಗೆ ಪಾಲ್ಗೊಳ್ಳುತ್ತಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.