ನವದೆಹಲಿ (ಪಿಟಿಐ): ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಹೊರಗೆ ಪಕ್ಷದ ಮುಖಂಡ ಯೋಗೇಂದ್ರ ಯಾದವ್ ಅವರು ಶನಿವಾರ ಧರಣಿ ಆರಂಭಿಸಿದ್ದಾರೆ.
ಎಎಪಿಯಲ್ಲಿ ಕೇಜ್ರಿವಾಲ್ ಬಣ ಮತ್ತು ಭೂಷಣ್– ಯಾದವ್ ಅವರ ನಡುವಿನ ಭಿನ್ನಮತ ಈಗ ಬೀದಿಗೆ ಬಂದಿದ್ದು, ಈ ಇಬ್ಬರು ಮುಖಂಡರನ್ನು ಪಕ್ಷದಿಂದ ಹೊರಹಾಕಲು ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಸಭೆ ನಡೆಯುತ್ತಿರುವ ಕಾಲಿಸ್ತಾ ರೆಸಾರ್ಟ್ನ ಹೊರಗೆ ಯಾದವ್ ಧರಣಿ ಕುಳಿತಿದ್ದಾರೆ. ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸೇರಿದಂತೆ ಪಕ್ಷದ ಪ್ರಮುಖರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.