ADVERTISEMENT

ಸಮಾಲೋಚನೆ ಕಡ್ಡಾಯ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2014, 19:30 IST
Last Updated 20 ಫೆಬ್ರುವರಿ 2014, 19:30 IST

ನವದೆಹಲಿ (ಪಿಟಿಐ): ರಾಜೀವ್‌ ಹತ್ಯೆ ಪ್ರಕರಣದ ಏಳು ಆರೋಪಿಗಳನ್ನು ಬಿಡು­ಗಡೆ ಮಾಡಬಾರದು ಎಂದು ತಮಿಳು­ನಾಡು ಸರ್ಕಾರಕ್ಕೆ ಕೇಂದ್ರ ಸೂಚನೆ ನೀಡಿದೆ.

ಟಾಡಾ, ಶಸ್ತ್ರಾಸ್ತ್ರ ಕಾಯ್ದೆಗಳಂತಹ ಕೇಂದ್ರ ಕಾನೂನುಗಳ ಅಡಿಯಲ್ಲಿ ಹಂತಕರ ವಿಚಾರಣೆ ನಡೆಸಿ ಶಿಕ್ಷೆ ವಿಧಿಸಲಾಗಿದೆ. ಹಾಗಾಗಿ ಅವರ ಬಿಡುಗಡೆಯಂತಹ ನಿರ್ಧಾರದಲ್ಲಿ ಕೇಂದ್ರ ಸರ್ಕಾರದೊಂದಿಗೆ ಸಮಾಲೋಚನೆ ಅಗತ್ಯ ಎಂದು ಗೃಹ ಸಚಿವಾಲಯ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.