ನವದೆಹಲಿ: ಸರ್ಕಾರ ಗೋವುಗಳನ್ನು ರಕ್ಷಿಸುವ ಕಾರ್ಯದಲ್ಲಿ ಬ್ಯುಸಿಯಾಗಿದೆ, ಮಹಿಳೆಯರನ್ನು ರಕ್ಷಿಸುವ ಕಾರ್ಯದಲ್ಲಿ ಅಲ್ಲ ಎಂದು ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ ಗುಡುಗಿದ್ದಾರೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ತಲೆ ಕಡಿದರೆ ₹11 ಲಕ್ಷ ಬಹುಮಾನ ನೀಡುತ್ತೇವೆ ಎಂದು ಭಾರತೀಯ ಜನತಾ ಯುವ ಮೋರ್ಚಾ ಮುಖಂಡರೊಬ್ಬರು ಘೋಷಿಸಿದ್ದು, ಈ ವಿಷಯದ ಬಗ್ಗೆ ರಾಜ್ಯ ಸಭೆಯಲ್ಲಿ ಚರ್ಚೆ ನಡೆದಿತ್ತು. ಭಾರತೀಯ ಜನತಾ ಯುವ ಮೋರ್ಚಾ ನಾಯಕನ ಹೇಳಿಕೆ ಖಂಡಿಸಿ ತೃಣಮೂಲ ಕಾಂಗ್ರೆಸ್ ಸಂಸದರು ಪ್ರತಿಭಟನೆ ನಡೆಸಿದ್ದರು.
ಈ ಪ್ರತಿಭಟನೆಯ ನಂತರ ಮಾತನಾಡಿದ ಜಯಾ ಬಚ್ಚನ್, ಮಹಿಳೆಯರ ರಕ್ಷಣೆಗಾಗಿ ಸರ್ಕಾರ ಗಂಭೀರ ನಡೆ ಸ್ವೀಕರಿಸಬೇಕಿದೆ. ನೀವು ಗೋವುಗಳನ್ನು ರಕ್ಷಿಸುತ್ತಿದ್ದೀರಿ ಆದರೆ ಮಹಿಳೆಯರ ಮೇಲೆ ಘೋರ ಕೃತ್ಯಗಳು ನಡೆಯುತ್ತಲೇ ಇದೆ ಎಂದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.