ADVERTISEMENT

ಸಲ್ಮಾನ್ ಜಾಮೀನು ನಿರ್ಣಯ ಇಂದು

ಪಿಟಿಐ
Published 6 ಏಪ್ರಿಲ್ 2018, 19:49 IST
Last Updated 6 ಏಪ್ರಿಲ್ 2018, 19:49 IST
ಸಲ್ಮಾನ್ ಜಾಮೀನು ನಿರ್ಣಯ ಇಂದು
ಸಲ್ಮಾನ್ ಜಾಮೀನು ನಿರ್ಣಯ ಇಂದು   

ಜೋಧಪುರ (ಪಿಟಿಐ): ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಜಾಮೀನು ಅರ್ಜಿಯ ನಿರ್ಣಯವನ್ನು ಸೆಷನ್ಸ್‌ ನ್ಯಾಯಾಲಯ ಶನಿವಾರದವ
ರೆಗೆ ಕಾಯ್ದಿರಿಸಿದೆ ಎಂದು ಅವರ ಪರ ವಕೀಲರು ತಿಳಿಸಿದ್ದಾರೆ.

ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಸಲ್ಮಾನ್‌ ಅವರಿಗೆ ಐದು ವರ್ಷ ಜೈಲು ಶಿಕ್ಷೆ ವಿಧಿಸಿ ಇಲ್ಲಿನ ನ್ಯಾಯಾಲಯ ಗುರುವಾರ ತೀರ್ಪು ನೀಡಿತ್ತು. ಗುರುವಾರವೇ ಅವರನ್ನು ಜೋಧಪುರ ಕೇಂದ್ರೀಯ ಕಾರಾಗೃಹಕ್ಕೆ ಕಳುಹಿಸಲಾಗಿತ್ತು. ಜಾಮೀನು ಅರ್ಜಿಯ ಮೇಲಿನ ತೀರ್ಪನ್ನು ಮುಂದೂಡಿರುವುದರಿಂದ ಮತ್ತೊಂದು ರಾತ್ರಿಯನ್ನು ಅವರು ಜೈಲಿನಲ್ಲಿ ಕಳೆಯುವುದು ಅನಿವಾರ್ಯವಾಗಿದೆ.

ಶಿಕ್ಷೆ ರದ್ದುಪಡಿಸುವಂತೆ ಹಾಗೂ ಜಾಮೀನು ನೀಡುವಂತೆ ಸೆಷನ್ಸ್‌ ನ್ಯಾಯಾಲಯದ ಮ್ಯಾಜಿಸ್ಟ್ರೇಟ್ ರವೀಂದ್ರ ಕುಮಾರ್ ಅವರ ಮುಂದೆ ಸಲ್ಮಾನ್‌ ಅರ್ಜಿ ಸಲ್ಲಿಸಿದ್ದಾರೆ.

ADVERTISEMENT

ಸಲ್ಮಾನ್ ಖಾನ್ ಅವರು ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದವರಾದ್ದರಿಂದ ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಐದು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ಪಾಕಿಸ್ತಾನ ಸಚಿವ ಖ್ವಾಜಾ ಆಸಿಫ್ ಗುರುವಾರ ಹೇಳಿದ್ದಾಗಿ ಪಾಕಿಸ್ತಾನದ ಸುದ್ದಿಸಂಸ್ಥೆ ವರದಿ ಮಾಡಿತ್ತು. 

ಈ ಹೇಳಿಕೆಯನ್ನು ಮಣಿಪುರ ರಾಜ್ಯಪಾಲೆ ನಜ್ಮಾ ಹೆಫ್ತುಲ್ಲಾ ಖಂಡಿಸಿದ್ದಾರೆ. ‘ಭಾರತದ ಆಂತರಿಕ ವ್ಯವಹಾರಗಳಲ್ಲಿ ಮಧ್ಯ
ಪ್ರವೇಶಿಸಲು ಪಾಕಿಸ್ತಾನ ಸಚಿವರಿಗೆ ಯಾವುದೇ ಹಕ್ಕಿಲ್ಲ’ ಎಂದು ಹೆಫ್ತುಲ್ಲಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.