ನವದೆಹಲಿ: ವಿಧಾನ ಪರಿಷತ್ತಿನ ಚುನಾವಣೆಯಲ್ಲಿ ಮತ ಹಾಕಲು ತಮ್ಮ ಪಕ್ಷದ ವಿಧಾನಸಭೆ ಸದಸ್ಯರು ತಲಾ ಒಂದು ಕೋಟಿ ರೂಪಾಯಿಗಳನ್ನು ಕೇಳುತ್ತಿದ್ದಾರೆಂದು ಜೆಡಿಎಸ್ ಮುಖಂಡ ಎಚ್.ಡಿ ಕುಮಾರಸ್ವಾಮಿ ಕೇಳಿದ್ದಾರೆಎನ್ನಲಾದ ಪ್ರಕರಣ ಕುರಿತು ಸಮಗ್ರ ವರದಿ ಕೊಡುವಂತೆ ರಾಜ್ಯ ಸರ್ಕಾರಕ್ಕೆ ಸೋಮವಾರ ಕೇಂದ್ರ ಕೇಳಿದೆ.
ಕುಮಾರಸ್ವಾಮಿ ಪ್ರಕರಣ ಕುರಿತು ವರದಿ ಕೊಡುವಂತೆ ಕೇಂದ್ರ ಗೃಹ ಸಚಿವಾಲಯ ರಾಜ್ಯ ಸರ್ಕಾರಕ್ಕೆ ಅಧಿಕೃತವಾಗಿ ಹೇಳಿದೆ. ಕುಮಾರಸ್ವಾಮಿ ಮಾತುಗಳನ್ನು ರೆಕಾರ್ಡ್ ಮಾಡಿಕೊಂಡಿರುವ ಸಿ.ಡಿ ಪ್ರತಿ ಕಳುಹಿಸುವಂತೆಯೂ ತಿಳಿಸಲಾಗಿದೆ. ವರದಿ ಬಂದ ಬಳಿಕ ಪರಿಶೀಲಿಸುವುದಾಗಿ ಗೃಹ ಸಚಿವಾಲಯದ ಉನ್ನತ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.
ವಿಜಾಪುರ ಜಿಲ್ಲೆ ಬಬಲೇಶ್ವರದ ಮುಖಂಡ ವಿಜುಗೌಡ ಪಾಟೀಲರನ್ನು ವಿಧಾನ ಪರಿಷತ್ತಿಗೆ ಆಯ್ಕೆ ಮಾಡುವಂತೆ ಅವರ ಬೆಂಬಲಿಗರು
ಮಾಹಿತಿ ಬಂದಿಲ್ಲ: ಸಿದ್ದರಾಮಯ್ಯ ಸಿ.ಡಿ ಬಹಿರಂಗ ಕುರಿತು ಕೇಂದ್ರ ಗೃಹ ಸಚಿವಾಲಯ ರಾಜ್ಯದ ಗೃಹ ಇಲಾಖೆಯಿಂದ ವರದಿ ಕೇಳಿದೆ ಎಂಬುದನ್ನು ಅಲ್ಲಗಳೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಕೇಂದ್ರ ಸರ್ಕಾರ ವರದಿ ಕೇಳಿರುವ ಬಗ್ಗೆ ನನಗೆ ಮಾಹಿತಿ ಬಂದಿಲ್ಲ’ ಎಂದರು. |
ಒತ್ತಡ ಹೇರಿದ ಸಮಯದಲ್ಲಿ ಕುಮಾರಸ್ವಾಮಿ ಅವರು ಆಡಿರುವ ಮಾತುಗಳನ್ನು ರಹಸ್ಯವಾಗಿ ರೆಕಾರ್ಡ್ ಮಾಡಿಕೊಳ್ಳಲಾಗಿದೆ. ಅನಂತರ ‘ವಿಜುಗೌಡ ಪಾಟೀಲ ಅಭಿಮಾನಿ ಬಳಗ’ದ ಹೆಸರಲ್ಲಿ ಸಿ.ಡಿಯನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಲಾಗಿದೆ.
ಕುಮಾರಸ್ವಾಮಿ ವಿಧಾನ ಪರಿಷತ್ ಚುನಾವಣೆಯಲ್ಲಿ ಮತ ಹಾಕಲು ಶಾಸಕರು ತಲಾ ಒಂದು ಕೋಟಿ ರೂಪಾಯಿಗಳನ್ನು ಕೇಳುತ್ತಿದ್ದಾರೆನ್ನುವ ಹೇಳಿಕೆ ಕುರಿತು ದೆಹಲಿಯ ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆ ನಡೆಯುತ್ತಿದೆ. ಸೋಮವಾರ ಸಂಸತ್ ಅಧಿವೇಶನದ ಸಮಯದಲ್ಲಿ ಕೆಲವರು ಮೊಗಸಾಲೆಯಲ್ಲಿ ಕುಮಾರ್ಸ್ವಾಮಿ ಹೇಳಿಕೆ ಬಗ್ಗೆ ಚರ್ಚೆ ನಡೆಸಿದ್ದು ಕಂಡುಬಂತು.
ಕಳೆದ ತಿಂಗಳು ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆದ ಚುನಾವಣೆ ಸಂದರ್ಭದಲ್ಲಿ ಜೆಡಿಎಸ್ ಶಾಸಕ ಬಲದ ಆಧಾರದಲ್ಲಿ ಒಬ್ಬರನ್ನು ಆಯ್ಕೆ ಮಾಡಲು ಅವಕಾಶವಿತ್ತು. ಈ ಸ್ಥಾನಕ್ಕೆ ತಮ್ಮನ್ನು ಆಯ್ಕೆ ಮಾಡುವಂತೆ ವಿಜುಗೌಡ ಪಟ್ಟು ಹಿಡಿದಿದ್ದರು. ಆ ಸಮಯದಲ್ಲಿ ನಡೆದ ಮಾತುಕತೆಗಳು ಸಿ.ಡಿಯಲ್ಲಿ ಮುದ್ರಿತವಾಗಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.