ADVERTISEMENT

ಸಿದ್ದರಾಮಯ್ಯಗೆ ಬಾದಲ್‌ ಪತ್ರ

ಕೈದಿಗಳ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2014, 19:30 IST
Last Updated 24 ಡಿಸೆಂಬರ್ 2014, 19:30 IST

ಚಂಡೀಗಡ: ಕರ್ನಾಟಕ ಸೇರಿದಂತೆ ದೇಶದ ವಿವಿಧ ಜೈಲುಗಳಲ್ಲಿರುವ ಪಂಜಾಬ್‌ನ 13 ಕೈದಿಗಳನ್ನು ಮಾನವೀಯತೆ ಆಧಾರದಲ್ಲಿ ಬಿಡುಗಡೆ ಮಾಡಲು ಸಹಕರಿಸುವಂತೆ ಕೋರಿ ಸಿದ್ದರಾಮಯ್ಯ ಸೇರಿದಂತೆ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪಂಜಾಬ್‌ ಮುಖ್ಯಮಂತ್ರಿ ಪ್ರಕಾಶ್‌ ಸಿಂಗ್‌ ಬಾದಲ್‌ ಪ್ರತ್ಯೇಕ ಪತ್ರ ಬರೆದಿದ್ದಾರೆ.

ಟಾಡಾ ಕಾಯಿದೆ ಅನ್ವಯ ಬಂಧಿತರಾಗಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಪಂಜಾಬ್‌ನ 13 ಮಂದಿ ದೇಶದ ವಿವಿಧ ಜೈಲುಗಳಲ್ಲಿದ್ದು, ಅವರನ್ನು ಮಾನವೀಯತೆ ಆಧಾರದಲ್ಲಿ ಬಿಡುಗಡೆ ಮಾಡುವಂತೆ ಬಾದಲ್‌  ಅವರು ಕೋರಿದ್ದಾರೆ.

ಕರ್ನಾಟಕದ ಕಲಬುರ್ಗಿ ಜೈಲಿನಲ್ಲಿರುವ ಗುರ್ದಿಪ್‌ ಸಿಂಗ್‌ ಖೈರಾ ಈಗಾಗಲೇ 24 ವರ್ಷ ಜೈಲು ಶಿಕ್ಷೆ ಅನುಭವಿಸಿದ್ದು, ಆತನನ್ನು ಅನುಕಂಪದ ಆಧಾರದಲ್ಲಿ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.