ADVERTISEMENT

ಸಿಬಿಐ ತನಿಖಾಧಿಕಾರಿಗೆ ಛೀಮಾರಿ

ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2014, 19:30 IST
Last Updated 15 ಡಿಸೆಂಬರ್ 2014, 19:30 IST

ನವದೆಹಲಿ (ಪಿಟಿಐ):  ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣ ತನಿಖಾ ಪ್ರಗತಿ ವರದಿ ನೀಡದ ಸಿಬಿಐ ತನಿಖಾಧಿಕಾರಿಗೆ ಸಿಬಿಐ ವಿಶೇಷ ನ್ಯಾಯಾಲ­ಯ ಸೋಮವಾರ ಛೀಮಾರಿ ಹಾಕಿತು.

ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಅವ್ಯವಹಾರ ಹಗರಣದ ಬಗ್ಗೆ ಹೆಚ್ಚಿನ ತನಿಖೆ ನಡೆಸಿ ಪ್ರಗತಿ ವರದಿ ಸಲ್ಲಿಸುವಂತೆ  ಆದೇಶಿಸಿ 46 ದಿನ ಕಳೆದರೂ ಇನ್ನೂ ಏಕೆ ವರದಿ ಸಲ್ಲಿಸಿಲ್ಲ ಎಂದು ಪ್ರಶ್ನಿಸಿದ ನ್ಯಾಯಾಧೀಶರು, ಈ ರೀತಿಯ ತಾತ್ಸಾರ ಸರಿಯಲ್ಲ ಎಂದು ತರಾಟೆಗೆ ತೆಗೆದುಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.