ಚೆನ್ನೈ (ಪಿಟಿಐ): ಕೇರಳದಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿರುವ ಕಾರಣ ಆ ರಾಜ್ಯದಿಂದ ಕೋಳಿ ಮತ್ತು ಕೋಳಿ ಮೊಟ್ಟೆ ಸಾಗಣೆಯನ್ನು ತಮಿಳುನಾಡು ಸರ್ಕಾರ ನಿರ್ಬಂಧಿಸಿದೆ.
ರಾಜ್ಯದಲ್ಲಿ ಹಕ್ಕಿ ಜ್ವರ ಹರಡದಂತೆ ತಡೆಯಲು ಕ್ರಮ ಕೈಗೊಂಡಿರುವ ಸರ್ಕಾರ, ಕೋಳಿ ಸಾಕಾಣಿಕೆಗಾಗಿ ಕೇರಳದಿಂದ ಸಾಗಣೆಯಾಗಿರುವ ಮೊಟ್ಟೆಗಳನ್ನೂ ನಾಶ ಮಾಡುವಂತೆ ಸೂಚಿಸಿದೆ.
ಸರ್ಕಾರದಿಂದ ಈ ಆದೇಶ ಹೊರಬೀಳುತ್ತಿದ್ದಂತೆಯೇ ಗಡಿಯ ಚೌಕಿಗಳಲ್ಲಿ ತಪಾಸಣೆ ತೀವ್ರಗೊಂಡಿದ್ದು, ಕೋಳಿ ಮತ್ತು ಮೊಟ್ಟೆಯನ್ನು ಸಾಗಿಸುತ್ತಿದ್ದ ವಾಹನಗಳನ್ನು ವಾಪಸು ಕಳುಹಿಸಲಾಗುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.