ವೆಲ್ಲೂರು (ಪಿಟಿಐ): ಕನ್ಯಾಕುಮಾರಿಯಿಂದ ಬೆಂಗಳೂರಿಗೆ ಬರುತ್ತಿದ್ದ ಎಕ್ಸ್ಪ್ರೆಸ್ ರೈಲಿನ 11 ಬೋಗಿಗಳು ತಮಿಳುನಾಡಿನ ಸೋಮನಾಯಕನ್ಪಟ್ಟಿ ಮತ್ತು ಪಚೂರ್ ನಿಲ್ದಾಣಗಳ ಮಧ್ಯೆ ಹಳಿ ತಪ್ಪಿದೆ. ಇದರಿಂದ ಹಲವು ಪ್ರಯಾಣಿಕರು ಗಾಯಗೊಂಡಿದ್ದು, ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ.
‘ಗಾಯಗೊಂಡ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನಿಂದ 140 ಕಿ.ಮೀ. ದೂರದ ನತ್ರಂಪಳ್ಳಿ ಎಂಬಲ್ಲಿ ಘಟನೆ ನಡೆದಿದ್ದು, ಹಿರಿಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ ಎಂದು ರೈಲ್ವೆ ಮೂಲಗಳು ತಿಳಿಸಿವೆ. ಘಟನೆ ನಂತರ ಬೆಂಗಳೂರಿಗೆ ತೆರಳಬೇಕಿದ್ದ ಪ್ರಯಾಣಿಕರಿಗೆ ವಾಹನ ವ್ಯವಸ್ಥೆ ಮಾಡಿ ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ತಾಂತ್ರಿಕ ಕಾರಣಗಳೇ ರೈಲು ಹಳಿ ತಪ್ಪಲು ಕಾರಣ ಎಂದು ಮೂಲಗಳು ತಿಳಿಸಿವೆ. ಆದರೆ ಘಟನೆಗೆ ಕಾರಣಗಳೇನು ಎಂಬುದು ಇನ್ನೂ ತಿಳಿಯಬೇಕಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.