ADVERTISEMENT

ಹಿರಿಯ ಪತ್ರಕರ್ತ ಎನ್. ರಾಮಚಂದ್ರನ್ ನಿಧನ

​ಪ್ರಜಾವಾಣಿ ವಾರ್ತೆ
Published 10 ಜೂನ್ 2014, 9:10 IST
Last Updated 10 ಜೂನ್ 2014, 9:10 IST

ತಿರುವನಂತಪುರ (ಪಿಟಿಐ): ಹಿರಿಯ ಪತ್ರಕರ್ತ, ‘ಕೇರಳ ಕೌಮುದಿ’ ಪತ್ರಿಕೆಯ ಸಂಪಾದಕೀಯ ಸಲಹೆಗಾರ ಎನ್. ರಾಮಚಂದ್ರನ್ (88) ಅವರು ಕಳೆದ ರಾತ್ರಿ ನಿಧನರಾಗಿದ್ದಾರೆ.

ರಾಮಚಂದ್ರನ್ ಅವರು ಸೋಮವಾರ ಸಂಪಾದಕೀಯ ಸಭೆಯಲ್ಲಿ ಭಾಗವಹಿಸಿದ ಬಳಿಕ ಮನೆಗೆ ಹಿಂದಿರುಗಿದ್ದು, ರಾತ್ರಿವೇಳೆ ಕೊನೆಯುಸಿರೆಳೆದರು ಎಂದು ಅವರ ಕುಟುಂಬದವರು ತಿಳಿಸಿದ್ದಾರೆ.

ರಾಮಚಂದ್ರನ್ ಅವರು ಪೂರ್ಣ ಪ್ರಮಾಣದಲ್ಲಿ ಪತ್ರಿಕಾ ವೃತ್ತಿಯಲ್ಲಿ ತೊಡಗಿಕೊಳ್ಳುವ ಮುಂಚೆ ಕೇರಳ ಲೋಕಸೇವಾ ಆಯೋಗದ ಸದಸ್ಯರಾಗಿ, ವ್ಯಾಪಾರ ಒಕ್ಕೂಟದಲ್ಲಿ ಸಕ್ರೀಯರಾಗಿ ಹಾಗೂ ಕ್ರಾಂತಿಕಾರಿ ಸಮಾಜವಾದಿ ಪಕ್ಷದ ಜತೆ ತಮ್ಮನ್ನು ಗುರುತಿಸಿಕೊಂಡಿದ್ದರು. ಮಾತ್ರವಲ್ಲ ತಿರುವನಂಪುರ ಪ್ರೆಸ್ ಕ್ಲಬ್‌ನ ಮಾಜಿ ಅಧ್ಯಕ್ಷರೂ ಆಗಿದ್ದ ಅವರು ಕೇರಳದ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಜತೆ ನಿಕಟ ಸಂಬಂಧ ಹೊಂದಿದ್ದರು.

ಆರು ದಶಕಗಳ ಕಾಲ ಪತ್ರಿಕಾ ರಂಗದಲ್ಲಿ ಸೇವೆ ಸಲ್ಲಿಸಿರುವ ಅವರು ಕೇರಳ ಕೌಮುದಿ ಪತ್ರಿಕೆಯಲ್ಲಿ ತೀಕ್ಷ್ಣವಾದ ಸಂಪಾದಕೀಯ ಮತ್ತು ಹರಿತವಾದ ರಾಜಕೀಯ ಪ್ರತಿಕ್ರಿಯೆಗಳನ್ನು ಬರೆದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.