ಮುಂಬೈ(ಪಿಟಿಐ): ಬಾಲಿವುಡ್ ನಟ ಶಾರುಖ್ಖಾನ್ಗೆ ಭೂಗತ ಜಗತ್ತಿನ ಬೆದರಿಕೆ ಹೆಚ್ಚುವ ಸಂಭವ ಇರುವುದರಿಂದ ಹೆಚ್ಚುವರಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
‘ಅವರಿಗೆ ಈಗಾಗಲೇ ಪೊಲೀಸ್ ಭದ್ರತೆ ಇದೆ. ಭೂಗತಲೋಕದ ಬೆದರಿಕೆ ಕಾರಣ ಭದ್ರತೆ ಹೆಚ್ಚಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಮುಂಬೈನ ಬಾಂದ್ರಾದಲ್ಲಿನ ಶಾರುಖ್ ನಿವಾಸಕ್ಕೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಎರಡು ದಿನಗಳ ಹಿಂದೆ ಭೂಗತ ಪಾತಕಿ ರವಿಪೂಜಾರಿ, ಬಾಲಿವುಡ್ ಚಿತ್ರ ನಿರ್ಮಾಪಕ ಆಲಿ ಮೊರಾನಿ ಅವರಿಗೆ ಬೆದರಿಕೆ ಒಡ್ಡಿದ್ದ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.