ನವದೆಹಲಿ(ಪಿಟಿಐ): ಚಿತ್ರ ಬಿಡುಗಡೆಗೆ ತಡೆಯೊಡ್ಡಲು ದೆಹಲಿ ಹೈಕೋರ್ಟ್ ಶುಕ್ರವಾರ ನಿರಾಕರಿಸಿರುವ ಹಿನ್ನೆಲೆಯಲ್ಲಿ ‘ಭೂತ್ನಾಥ್ ರಿಟರ್ನ್ಸ್’ ಚಲನಚಿತ್ರ ನಿಗದಿಯಂತೆ ಏಪ್ರಿಲ್ 11ರಂದು ತೆರೆಕಾಣಲಿದೆ.
ಅಮಿತಾಬ್ ಬಚ್ಚನ್ ಮತ್ತು ಬೊಮನ್ ಇರಾನಿ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಂಡಿರುವ ಈ ಚಿತ್ರವನ್ನು ತನ್ನ ಸಾಹಿತ್ಯ ಕೃತಿಯೊಂದನ್ನು ನಕಲು ಮಾಡಿ ತಯಾರಿಸಲಾಗಿದೆ ಎಂದು ಹಿಂದಿ ಬರಹಗಾರ ಸುಶಾಂತ್ ಸುಪ್ರಿಯಾ ಮಧ್ಯಾಂತರ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಶುಕ್ರವಾರ ಈ ಅರ್ಜಿಯನ್ನು ತಿರಸ್ಕರಿಸಿದೆ.
ಮೊಕದ್ದಮೆಗೆ ಸಂಬಂಧಿಸಿದಂತೆ ನಾಲ್ಕು ವಾರದೊಳಗೆ ಪ್ರತಿಕ್ರಿಯೆ ನೀಡುವಂತೆ ಚಲನಚಿತ್ರದ ನಿರ್ಮಾಪಕರು ಮತ್ತು ಇತರರಿಗೆ ನ್ಯಾಯಮೂರ್ತಿ ಎ.ಕೆ. ಪಾಠಕ್ ಸೂಚಿಸಿದ್ದಾರೆ.
ತನ್ನ ಈ ನಿಲುವೇ ಅಂತಿಮವಲ್ಲ ಎಂದು ಹೇಳಿರುವ ಕೋರ್ಟ್ ಪ್ರಕರಣದ ವಿಚಾರಣೆಯನ್ನು ಜುಲೈ 7ಕ್ಕೆ ಮುಂದೂಡಿದೆ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.