ADVERTISEMENT

‘ಮುಸ್ಲಿಮರೇ ದೇಶ ಕಟ್ಟಿದ್ದಾರೆ’

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2014, 19:30 IST
Last Updated 20 ಏಪ್ರಿಲ್ 2014, 19:30 IST

ಫಿರೋಜಾಬಾದ್‌ (ಉ. ಪ್ರ.): ಚುನಾವಣೆ ಸಂದರ್ಭದಲ್ಲಿ ಮುಸ್ಲಿಮರ ಓಲೈಕೆಗೆ ಮುಂದಾ­ಗಿ­ರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್‌ ಯಾದವ್‌, ತಾವು ಅಧಿಕಾರಕ್ಕೆ ಬಂದಲ್ಲಿ ಸಂವಿಧಾನಕ್ಕೆ ತಿದ್ದುಪಡಿ ತಂದು ಮುಸ್ಲಿಮರಿಗೆ ಮೀಸಲಾತಿ ದೊರಕಿಸಿಕೊಡಲು ಯತ್ನಿಸುವುದಾಗಿ ಹೇಳಿದ್ದಾರೆ. ಮೋದಿ ಅಧಿಕಾರಕ್ಕೆ ಬರದಂತೆ ತಡೆಯುವ ಶಕ್ತಿ ಸಮಾಜ­ವಾದಿ ಪಕ್ಷಕ್ಕೆ ಮಾತ್ರ ಇದೆ ಎಂದು ಹೇಳಿದ್ದಾರೆ.

ಮುಸ್ಲಿಮರು ಈ ದೇಶ ಕಟ್ಟಿದ್ದಾರೆ ಹಾಗೂ ಅವರ ಮೀಸಲಾತಿಗಾಗಿ ಸಂವಿಧಾನಕ್ಕೆ ತಿದ್ದುಪಡಿ ತರಲಾ­ಗು­ವುದು ಎಂದು ಭರವಸೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.