ADVERTISEMENT

‘ಮೋದಿ ಮನ್‌ ಕೀ ಬಾತ್‌ ಚಾಂಪಿಯನ್‌’

​ಪ್ರಜಾವಾಣಿ ವಾರ್ತೆ
Published 3 ಆಗಸ್ಟ್ 2015, 15:44 IST
Last Updated 3 ಆಗಸ್ಟ್ 2015, 15:44 IST

ನವದೆಹಲಿ (ಪಿಟಿಐ): ಮನ್‌ ಕೀ ಬಾತ್‌ ಚಾಂಪಿಯನ್‌ ಆಗಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಬಿಜೆಪಿಯ ಕೆಲವು ಮುಖಂಡರು ಹಗರಣಗಳಲ್ಲಿ ಸಿಲುಕಿರುವ ಬಗ್ಗೆ ತಿಳಿದಿದ್ದರೂ ಮೌನವಾಗಿರುವುದೇಕೆ ಎಂದು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಕಿಡಿ ಕಾರಿದ್ದಾರೆ.

ಇಂದು ನಡೆದ ಕಾಂಗ್ರೆಸ್‌ ಸಂಸದೀಯ ಮಂಡಳಿ ಸಭೆಯಲ್ಲಿ ಮಾತನಾಡಿದ ಅವರು ಕಳಂಕಿತ ಸಚಿವರು ರಾಜಿನಾಮೆ ನೀಡುವವರೆಗೂ ಸದನದಲ್ಲಿ ಹೋರಾಟ ಮುಂದುವರೆಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ಸದನದಲ್ಲಿ  ಬಿಜೆಪಿ ಹಗರಣಗಳ ಬಗ್ಗೆ ಕಾಂಗ್ರೆಸ್‌ ಧ್ವನಿ ಎತ್ತಲಿದೆ ಇದಕ್ಕೆ ಸಂಬಂಧಿಸಿದಂತೆ ಬಲವಾದ ಸಾಕ್ಷಿಗಳು ನಮ್ಮ ಬಳಿ ಇವೆ ಎಂದು ಅವರು ತಿಳಿಸಿದರು.

ಕಳಂಕಿತ ಸಚಿವರ ವಿರುದ್ಧ ಕ್ರಮ ಕೈಗೊಂಡು ಪ್ರಧಾನಮಂತ್ರಿಗಳು  ರೇಡಿಯೊದಲ್ಲಿ ನೈತಿಕ ಪಾಠ ಮಾಡಲಿ ಎಂದು ಮೋದಿ ವಿರುದ್ಧ ಸೋನಿಯಾ ಗಾಂಧಿ ವಾಗ್ದಾಳಿ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT