ADVERTISEMENT

‘ಹರ್ಷವರ್ಧನ್‌ ವಾಪಸ್‌ ಸಾಧ್ಯತೆ ಇಲ್ಲ’

​ಪ್ರಜಾವಾಣಿ ವಾರ್ತೆ
Published 21 ಜೂನ್ 2014, 19:30 IST
Last Updated 21 ಜೂನ್ 2014, 19:30 IST

ನವದೆಹಲಿ (ಪಿಟಿಐ):  ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್‌  ದೆಹಲಿ ರಾಜಕಾರಣಕ್ಕೆ ಮರಳುವ ಸಾಧ್ಯತೆಯನ್ನು ಕೇಂದ್ರ ಸಚಿವ ನಿತಿನ್‌ ಗಡ್ಕರಿ ತಳ್ಳಿ ಹಾಕಿದ್ದಾರೆ.

ಪಕ್ಷದ ದೆಹಲಿ ಉಸ್ತುವಾರಿಯನ್ನೂ ಹೊತ್ತಿರುವ ಗಡ್ಕರಿ ಅವರು, ‘ಯಾವುದೇ ಕಾರಣಕ್ಕೂ ಸಂಸದರು ರಾಜೀನಾಮೆ ನೀಡುವ ಸಂದರ್ಭ ಬರದಂತೆ ನೋಡಿಕೊಳ್ಳಬೇಕೆಂದು ಪಕ್ಷ ತೀರ್ಮಾನ ತೆಗೆದುಕೊಂಡಿದೆ. ಹೀಗಾಗಿ ಹರ್ಷವರ್ಧನ್‌ ದೆಹಲಿ ರಾಜಕಾರಣಕ್ಕೆ ಮರಳುವ ಸಾಧ್ಯತೆ ಇಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.