ADVERTISEMENT

19 ಭಾರತೀಯ ಮೀನುಗಾರರನ್ನು ಬಂಧಿಸಿದ ಲಂಕಾ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2015, 8:07 IST
Last Updated 10 ಅಕ್ಟೋಬರ್ 2015, 8:07 IST

ನಾಗಪಟ್ಟಣಂ/ತಮಿಳುನಾಡು (ಪಿಟಿಐ): ಅಂತರರಾಷ್ಟ್ರೀಯ ಸಮುದ್ರ ಗಡಿ ಉಲ್ಲಂಘಿಸಿದ್ದಾರೆಂದು ಆರೋಪಿಸಿ ಶನಿವಾರ ಬೆಳಗಿನ ಜಾವ ಶ್ರೀಲಂಕಾದ ನೌಕಾಪಡೆ 19 ಭಾರತೀಯ ಮೀನುಗಾರರನ್ನು ವಶಕ್ಕೆ ಪಡೆದಿದೆ.

ಬಂಧಿತರು ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಯ ಅಕ್ಕರೆಪೇಟೈ ಮತ್ತು ಕೀಚನ್‌ಕುಪ್ಪಂ ಪ್ರದೇಶಗಳಿಗೆ ಸೇರಿದವರು. ಇವರಿಗೆ ಸೇರಿದ ಎರಡು ಬೋಟುಗಳನ್ನೂ ಲಂಕಾ ಸೇನೆ ವಶಪಡಿಸಿಕೊಂಡಿದೆ ಎಂದು ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಸುಬ್ಬರಾಜ್‌ ತಿಳಿಸಿದ್ದಾರೆ.

ಸೆಪ್ಟೆಂಬರ್‌ 22 ರಂದು ಶ್ರೀಲಂಕಾ ನೌಕಾಪಡೆ 22 ಭಾರತೀಯ ಮೀನುಗಾರರನ್ನು ಬಂಧಿಸಿದ್ದನ್ನು ಇಲ್ಲಿ ಸ್ಮರಿಸಬಹುದು.  ಪಾಕ್‌ ಜಲಸಂಧಿ ಬಳಿ ಮೀನುಗಾರಿಕೆ ನಡೆಸುತ್ತಿದ್ದಾಗ ಇವರನ್ನು ವಶಕ್ಕೆ ಪಡೆಯಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT