ನವದೆಹಲಿ (ಐಎಎನ್ಎಸ್): 1993ರಿಂದ 2011ರವರೆಗೆ ಮಂಜೂರಾಗಿರುವ ಎಲ್ಲ ಕಲ್ಲಿದ್ದಲು ನಿಕ್ಷೇಪಗಳ ಹಂಚಿಕೆಯನ್ನು ರದ್ದುಗೊಳಿಸಲು ಸುಪ್ರೀಂಕೋರ್ಟ್ ಬುಧವಾರ ಆದೇಶಿಸಿದೆ.
ದೇಶದ 218 ಕಲ್ಲಿದ್ದಲು ನಿಕ್ಷೇಪಗಳ ಪೈಕಿ ನಾಲ್ಕು ನಿಕ್ಷೇಪಗಳನ್ನು ಹೊರತು ಪಡಿಸಿ ಎಲ್ಲ 214 ನಿಕ್ಷೇಪಗಳನ್ನು ಮುಚ್ಚಲು ಸುಪ್ರೀಂಕೋರ್ಟ್ ಆದೇಶದಲ್ಲಿ ತಿಳಿಸಿದೆ.
ಎನ್ಟಿಪಿಸಿ ಮತ್ತು ಇತರೆ ಸರ್ಕಾರಿ ಸ್ವಾಮ್ಯದ ಕಲ್ಲಿದ್ದಲು ನಿಕ್ಷೇಪಗಳನ್ನು ಹೊರತುಪಡಿಸಿ ಉಳಿದೆಲ್ಲ ನಿಕ್ಷೇಪಗಳನ್ನು ಮುಚ್ಚುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ.
ಮುಖ್ಯ ನ್ಯಾಯಮೂರ್ತಿ ಆರ್.ಎಂ.ಲೋಧಾ ಅವರ ನೇತೃತ್ವದ ನ್ಯಾಯಪೀಠ ಈ ಮಹತ್ವದ ತೀರ್ಪು ಪ್ರಕಟಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.