ADVERTISEMENT

33 ಮೀನುಗಾರರ ಬಂಧನ

​ಪ್ರಜಾವಾಣಿ ವಾರ್ತೆ
Published 1 ಜೂನ್ 2014, 19:30 IST
Last Updated 1 ಜೂನ್ 2014, 19:30 IST

ರಾಮೇಶ್ವರ (ತಮಿಳುನಾಡು) (ಪಿಟಿಐ): ಪ್ರತ್ಯೇಕ ಘಟನೆಗಳಲ್ಲಿ ಭಾರತದ 33 ಮೀನುಗಾರರನ್ನು ಶ್ರೀಲಂಕಾದ ನೌಕಾಪಡೆ ಬಂಧಿಸಿದೆ.
ತಮಿಳುನಾಡಿನ ಮನ್ನಾರ್ ಜಿಲ್ಲೆ ಮತ್ತು ಶ್ರೀಲಂಕಾದ ಉತ್ತರ ಪ್ರಾಂತ್ಯದ ಕಿರುದ್ವೀಪ ಕಚ್ಚತೀವು ಸಮೀಪ ಮೀನುಗಾರಿಕೆಯಲ್ಲಿ ತೊಡಗಿದ್ದ ಈ ಮೀನುಗಾರರನ್ನು ಬಂಧಿಸಿರುವುದಾಗಿ ಪೊಲೀಸ್ ಮತ್ತು ಮೀನುಗಾರಿಕೆ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭ ದಲ್ಲಿ ಶ್ರೀಲಂಕಾ ಅಧ್ಯಕ್ಷ ಮಹಿಂದಾ ರಾಜಪಕ್ಸೆ ಭಾಗವಹಿಸಿದ  ವಾರದಲ್ಲೇ ಮೀನುಗಾರರ ಬಂಧನ­ವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.