ADVERTISEMENT

ದಲಿತ ಯುವಕರನ್ನು ಕೊಂದವರಿಗೆ ಗಲ್ಲು

​ಪ್ರಜಾವಾಣಿ ವಾರ್ತೆ
Published 20 ಜನವರಿ 2018, 19:30 IST
Last Updated 20 ಜನವರಿ 2018, 19:30 IST

ನಾಸಿಕ್: ಐದು ವರ್ಷಗಳ ಹಿಂದೆ ಅಹ್ಮದ್‌ನಗರ್ ಜಿಲ್ಲೆಯ ಸೋನಿಯಾ ಗ್ರಾಮದಲ್ಲಿ ಮೂವರು ದಲಿತ ಯುವಕರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಆರು ಆರೋಪಿಗಳಿಗೆ ಇಲ್ಲಿನ ಸೆಷನ್ಸ್ ನ್ಯಾಯಾಲಯವು ಶನಿವಾರ ಗಲ್ಲುಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

2013ರ ಜನವರಿ 1ರಂದು ಸಚಿನ್ ಗುರು (24), ಸಂದೀಪ್ ತನ್ವರ್ (25) ಹಾಗೂ ರಾಹುಲ್ ಕಂಡ್ರೆ (20) ಎಂಬುವವರನ್ನು ಹತ್ಯೆ ಮಾಡಲಾಗಿತ್ತು.

ಸಚಿನ್ ಮೇಲ್ಜಾತಿಯ ಹುಡುಗಿಯನ್ನು ಪ್ರೀತಿಸಿದ್ದ ಎಂಬ ಕಾರಣಕ್ಕೆ ಮೂವರನ್ನು ಕೊಲ್ಲಲಾಗಿತ್ತು. ನಂತರ ದೇಹಗಳನ್ನು ಕೊಚ್ಚಿಹಾಕಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.