ಲಖನೌ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕನೌಜ್ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಸೋಮವಾರ ತಿಳಿಸಿದರು.
ಅಖಿಲೇಶ್ ಯಾದವ್ ಹೆಂಡತಿ ಡಿಂಪಲ್ ಯಾದವ್, ಪ್ರಸ್ತುತ ಕನೌಜ್ ಕ್ಷೇತ್ರದ ಸಂಸದರಾಗಿದ್ದಾರೆ. ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಮೈನ್ಪುರಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಿದರು.
2014ರ ಲೋಕಸಭಾ ಚುನಾವಣೆಯಲ್ಲಿ ಮುಲಾಯಂ ಸಿಂಗ್ ಯಾದವ್, ಅಜಂಗಡ ಮತ್ತು ಮೈನ್ಪುರಿ ಕ್ಷೇತ್ರಗಳಿಂದ ಸ್ಪರ್ಧಿಸಿ, ಎರಡರಲ್ಲೂ ಜಯ ಸಾಧಿಸಿದ್ದರು. ಆದರೆ, ನಂತರ ಅಜಂಘಡ ಕ್ಷೇತ್ರ ಉಳಿಸಿಕೊಂಡು ಮೈನ್ಪುರಿ ಕ್ಷೇತ್ರದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಮುಲಾಯಂ ಮೊಮ್ಮಗ ತೇಜ್ ಪ್ರತಾಪ್ ಯಾದವ್ ಜಯಗಳಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.