ADVERTISEMENT

ಜೈಪುರ ಸಾಹಿತ್ಯ ಉತ್ಸವಕ್ಕೆ ಬಿಗಿ ಭದ್ರತೆ

ಪಿಟಿಐ
Published 23 ಜನವರಿ 2018, 20:02 IST
Last Updated 23 ಜನವರಿ 2018, 20:02 IST

ಜೈಪುರ: ಜೈಪುರ ಸಾಹಿತ್ಯ ಉತ್ಸವದ 11ನೇ ಆವೃತ್ತಿಯು ಗುರುವಾರ ಆರಂಭವಾಗಲಿದ್ದು, ರಜಪೂತ ಕರ್ಣಿ ಸೇನಾದ ಬೆದರಿಕೆಯನ್ನು ಗಮನದಲ್ಲಿಟ್ಟುಕೊಂಡು ಉತ್ಸವಕ್ಕೆ ಬಿಗಿ ಭದ್ರತೆ ಕಲ್ಪಿಸಲಾಗಿದೆ.

ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ ಅಧ್ಯಕ್ಷ ಪ್ರಸೂನ್‌ ಜೋಷಿ ಅವರು ಉತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಂಘಟಕ ಸಂಜಯ್‌ ರಾಯ್‌ ಹೇಳಿದ್ದಾರೆ.

ಸಾಹಿತ್ಯ ಉತ್ಸವ ನಡೆಯಲಿರುವ ಡಿಗ್ಗಿ ಪ್ಯಾಲೇಸ್‌ಗೆ ಮಂಗಳವಾರ ಹಿರಿಯ ಪೊಲೀಸ್‌ ಅಧಿಕಾರಿಗಳ ತಂಡ ಭೇಟಿ ನೀಡಿ ಭದ್ರತಾ ಪರಿಶೀಲನೆ ನಡೆಸಿದೆ.

ADVERTISEMENT

500ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ ಎಂದು ಜೈಪುರ ಪೊಲೀಸ್‌ ಕಮಿಷನರ್‌ ಸಂಜಯ್‌ ಅಗರ್‌ವಾಲ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.