ಶ್ರೀನಗರ: ಇಲ್ಲಿನ ಆಸ್ಪತ್ರೆಯಲ್ಲಿ ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದ ಉಗ್ರ ನವೀದ್ ಜಾಟ್ ಬೈಕಿನಲ್ಲಿ ಪರಾರಿಯಾಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಸಂಬಂಧದ ವಿಡಿಯೊ ಪೊಲೀಸರಿಗೆ ಲಭ್ಯವಾಗಿದೆ.
ಅಲ್ಲದೇ ಈ ದಾಳಿ ಸಂಬಂಧ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ. ಐದನೇ ಆರೋಪಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಹೇಳಿದ್ದಾರೆ.
ಲಷ್ಕರ್–ಎ–ತಯೆಬಾ ಈ ದಾಳಿಯ ಹೊಣೆ ಹೊತ್ತಿದೆ. ಲಭ್ಯವಾದ ದೃಶ್ಯಾವಳಿಯನ್ನು ಆಧರಿಸಿ ಜಮ್ಮು ಕಾಶ್ಮೀರ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.