ADVERTISEMENT

ಕಮಲಹಾಸನ್ ರಾಜಕೀಯ ಪಕ್ಷ ಬುಧವಾರ ಅಸ್ತಿತ್ವಕ್ಕೆ

ಏಜೆನ್ಸೀಸ್
Published 20 ಫೆಬ್ರುವರಿ 2018, 8:45 IST
Last Updated 20 ಫೆಬ್ರುವರಿ 2018, 8:45 IST
ಕಮಲಹಾಸನ್ (ಸಂಗ್ರಹ ಚಿತ್ರ)
ಕಮಲಹಾಸನ್ (ಸಂಗ್ರಹ ಚಿತ್ರ)   

ಚೆನ್ನೈ: ನಟ ಕಮಲಹಾಸನ್ ಅವರ ರಾಜಕೀಯ ಪಕ್ಷ ಬುಧವಾರ ಮದುರೈನಲ್ಲಿ ಅಸ್ತಿತ್ವಕ್ಕೆ ಬರಲಿದೆ. ನಂತರ ಅವರು ತಮಿಳುನಾಡಿನಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ.

ಮೊದಲ ಹಂತದಲ್ಲಿ ಅವರು ರಾಮನಾಥಪುರ, ಮದುರೈ, ದಿಂಡಿಗಲ್ ಮತ್ತು ಶಿವಗಂಗೆ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ.

ಪಕ್ಷದ ಉದ್ಘಾಟನಾ ಸಮಾರಂಭದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಭಾಗವಹಿಸುವ ಸಾಧ್ಯತೆ ಇದೆ.  ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೂ ಆಮಂತ್ರಣ ನೀಡಲಾಗಿದೆ. ಆದರೆ ಅವರ ಭಾಗವಹಿಸುವಿಕೆ ಇನ್ನೂ ದೃಢಪಟ್ಟಿಲ್ಲ.

ADVERTISEMENT

ಕಮಲಹಾಸನ್ ಅವರು ಭಾನುವಾರ ಖ್ಯಾತ ನಟ ರಜನಿಕಾಂತ್ ಅವರನ್ನು ಭೇಟಿ ಮಾಡಿ 15 ನಿಮಿಷ ಮಾತುಕತೆ ನಡೆಸಿದ್ದರು. ರಜನಿಕಾಂತ್ ಅವರನ್ನೂ ಕಮಲಹಾಸನ್ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.