ಚೆನ್ನೈ: ಸುಪ್ರೀಂ ಕೋರ್ಟ್ ಕರ್ನಾಟಕ ರಾಜ್ಯಕ್ಕೆ 14.75 ಸಾವಿರ ದಶಲಕ್ಷ ಘನ ಅಡಿಗಳಷ್ಟು (ಟಿ.ಎಂ.ಸಿ.ಅಡಿಗಳು) ಹೆಚ್ಚುವರಿ ಕಾವೇರಿ ನೀರನ್ನು ಹಂಚಿಕೆ ಮಾಡಿ, ತಮಿಳನಾಡಿಗೆ ನೀರನ್ನು ಕಡಿತಗೊಳಿಸಿರುವುದರಿಂದ ಮುಂದಿನ ನಡೆಯನ್ನು ಚರ್ಚಿಸಲು ತಮಿಳುನಾಡು ಸರ್ಕಾರ ಗುರುವಾರ ಸರ್ವ ಪಕ್ಷ ಸಭೆ ಕರೆದಿದೆ.
ಫೆ. 16ರಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿತ್ತು.
‘ಎಲ್ಲಾ ಪಕ್ಷಗಳ ಮುಖಂಡರ ಅಭಿಪ್ರಾಯಗಳನ್ನು ಪಡೆದು, ಸಮಾಲೋಚಿಸಿದ ಬಳಿಕ ಸರಕಾರ ಈ ವಿಷಯದ ಕುರಿತು ಮುಂದಿನ ನಡೆ ಅನುಸರಿಸಲಿದೆ’ ಎಂದು ಮೂಲಗಳು ತಿಳಿಸಿವೆ.
ಸಭೆಯಲ್ಲಿ ಮುಖ್ಯಮಂತ್ರಿ ಸೇರಿದಂತೆ ಎಐಎಡಿಎಂಕೆ ಹಾಗೂ ಡಿಎಂಕೆ ಸದಸ್ಯರು ಭಾಗವಹಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.