ADVERTISEMENT

ಬಿಜೆಪಿ ಸಂಸ್ಥಾಪನಾ ದಿನಕ್ಕೆ ಪ್ರಧಾನಿ ಮೋದಿ ನೀಡಿದ ಸಂದೇಶವಿದು 

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2020, 3:51 IST
Last Updated 6 ಏಪ್ರಿಲ್ 2020, 3:51 IST
ಕೊರೊನಾ ವೈರಸ್‌ ವಿರುದ್ಧ ದೇಶವನ್ನು ಒಟ್ಟುಗೂಡಿಸುವ ಸಲುವಾಗಿ ಭಾನುವಾರ ರಾತ್ರಿ 9 ಗಂಟೆಗೆ ದೀಪ ಬೆಳಗಿದ ನರೇಂದ್ರ ಮೋದಿ
ಕೊರೊನಾ ವೈರಸ್‌ ವಿರುದ್ಧ ದೇಶವನ್ನು ಒಟ್ಟುಗೂಡಿಸುವ ಸಲುವಾಗಿ ಭಾನುವಾರ ರಾತ್ರಿ 9 ಗಂಟೆಗೆ ದೀಪ ಬೆಳಗಿದ ನರೇಂದ್ರ ಮೋದಿ    

ಬೆಂಗಳೂರು: ಭಾರತೀಯ ಜನತಾ ಪಕ್ಷವನ್ನು ಸ್ಥಾಪನೆ ಮಾಡಿ ಇಂದಿಗೆ 40 ವರ್ಷಗಳು ಸಂದಿರುವ ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್‌ ಮಾಡಿ ಕಾರ್ಯಕರ್ತರು ಮುಖಂಡರಿಗೆ ಶುಭ ಕೋರಿದ್ದಾರೆ.

ಪಕ್ಷಕ್ಕೆ ಅಧಿಕಾರ ಸಿಕ್ಕಾಗೆಲ್ಲ ಉತ್ತಮ ಆಡಳಿತ ಮತ್ತು ಬಡವರ ಕಲ್ಯಾಣಕ್ಕಾಗಿ ದುಡಿದಿದೆ ಎಂದು ಪ್ರಧಾನಿ ಮೋದಿ ಟ್ವೀಟ್‌ನಲ್ಲಿ ಹೇಳಿದ್ದಾರೆ.

ಏನಿದೆ ಪ್ರಧಾನಿ ಟ್ವೀಟ್‌ನಲ್ಲಿ?

ADVERTISEMENT

ಬಿಜೆಪಿಯ ಕಾರ್ಯಕರ್ತರಿಗೆ ಶುಭಾಶಯಗಳು. ರಕ್ತ ಮತ್ತು ಬೆವರಿನಿಂದ ಪಕ್ಷಕ್ಕೆ ನೀರುಣಿಸಿದ ಎಲ್ಲರನ್ನೂ ನಾನು ಗೌರವಿಸುತ್ತೇನೆ. ಅವರ ಕಾರಣದಿಂದಾಗಿ ಇಂದು ದೇಶಾದ್ಯಂತ ಕೋಟ್ಯಂತರ ಭಾರತೀಯರಿಗೆ ಸೇವೆ ಸಲ್ಲಿಸಲು ಬಿಜೆಪಿಗೆ ಅವಕಾಶ ಸಿಕ್ಕಿದೆ. ಪಕ್ಷದ ತತ್ವಗಳಿಗೆ ಅನುಸಾರವಾಗಿ, ನಮ್ಮ ಕಾರ್ಯಕರ್ತರು ಜನರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತರಲು ಶ್ರಮಿಸಿದ್ದಾರೆ. ಮತ್ತು, ಸಾಮಾಜ ಸೇವೆಯ ಹೊಸ ಮಾದರಿಯನ್ನು ನೀಡಿದ್ದಾರೆ. ದೇಶವು COVID-19 ವಿರುದ್ಧ ಹೋರಾಡುತ್ತಿರುವ ಈ ಸಮಯದಲ್ಲಿ ಬಿಜೆಪಿಯ 40ನೇ ಸಂಸ್ಥಾಪನಾ ದಿನವೂ ಬಂದಿದೆ. ಈ ಸಮಯದಲ್ಲಿ ಪಕ್ಷದ ಕಾರ್ಯಕರ್ತರು, ಪಕ್ಷದ ಅಧ್ಯಕ್ಷರು ಮಾರ್ಗಸೂಚಿಗಳನ್ನು ಪಾಲಿಸುವಂತೆ ನಾನು ಆಗ್ರಹಿಸುತ್ತೇನೆ. ಕಾರ್ಯಕರ್ತರು ಅವುಗಳನ್ನು ಅನುಸರಿಸಬೇಕು. ಸಾಮಾಜಿಕ ಅಂತರ ಪಾಲಿಸಿ. COVID-19 ವಿರುದ್ಧ ಭಾರತವನ್ನು ಒಗ್ಗೂಡಿಸಿ ಮತ್ತು ಅದರಿಂದ ದೇಶವನ್ನು ಮುಕ್ತಗೊಳಿಸಿ,’ ಎಂದು ಮೋದಿ ಟ್ವೀಟ್‌ ಮಾಡಿದ್ದಾರೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.