ADVERTISEMENT

ಏಕಕಾಲಕ್ಕೆ ಲೋಕಸಭೆ, ರಾಜ್ಯ ವಿಧಾನಸಭೆ ಚುನಾವಣೆ ಅಸಾಧ್ಯ: ಓಂಪ್ರಕಾಶ್‌ ರಾವತ್

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2018, 13:46 IST
Last Updated 23 ಆಗಸ್ಟ್ 2018, 13:46 IST
   

ನವದೆಹಲಿ: ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆ ಚುನಾವಣೆಯನ್ನು ಏಕಕಾಲಕ್ಕೆ ನಡೆಸಲು ಸಾಧ್ಯವಿಲ್ಲ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥರಾದ ಓಂಪ್ರಕಾಶ್‌ ರಾವತ್ ಗುರುವಾರ ತಿಳಿಸಿದ್ದಾರೆ.

ಬಿಜೆಪಿಯ ಒಂದು ದೇಶ, ಒಂದು ಚುನಾವಣೆ ಅಭಿಯಾನಕ್ಕೆಅವರು ಪ್ರತಿಕ್ರಿಯಿಸಿ ಮಾತನಾಡಿದರು.

ಲೋಕಸಭೆ ಮತ್ತು ವಿವಿಧ ರಾಜ್ಯಗಳ ವಿಧಾನಸಭೆ ಚುನಾವಣೆಯನ್ನು ಏಕಕಾಲದಲ್ಲಿ ನಡೆಸುವ ಬಗ್ಗೆ ಬಿಜೆಪಿ ಒಲವು ವ್ಯಕ್ತಪಡಿಸಿತ್ತು. ಇದನ್ನುಪ್ರತಿಪಕ್ಷಗಳು ವಿರೋಧಿಸಿದ್ದವು

ADVERTISEMENT

ಏಕಕಾಲದಲ್ಲಿ ಚುನಾವಣೆ ನಡೆಸಲು ಕಾನೂನು ನಿಯಮಗಳ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ರಾವತ್ ಈ ಹಿಂದೆ ಹೇಳಿದ್ದರು. ಗುರುವಾರಔರಂಗಬಾದ್‌ನಲ್ಲಿ ಪಿಟಿಐ ಸುದ್ದಿ ಸಂಸ್ಥೆಗೆ ಪ್ರತಿಕ್ರಿಸಿದ ಅವರು ಏಕಕಾಲದಲ್ಲಿ ಚುನಾವಣೆ ನಡೆಸಲು ಅಸಾಧ್ಯ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.