ADVERTISEMENT

ಅಕ್ರಮ ಪ್ರವೇಶ 13 ಮೀನುಗಾರರ ವಿರುದ್ಧ ಪ್ರಕರಣ

​ಪ್ರಜಾವಾಣಿ ವಾರ್ತೆ
Published 29 ಜೂನ್ 2016, 20:19 IST
Last Updated 29 ಜೂನ್ 2016, 20:19 IST

ಕಾರವಾರ: ಇಲ್ಲಿನ ಸೀಬರ್ಡ್‌ ನೌಕಾನೆಲೆ ವ್ಯಾಪ್ತಿಯ ನಿಷೇಧಿತ ಪ್ರದೇಶದೊಳಗೆ ಮೀನುಗಾರಿಕೆಗೆ ತೆರಳಿದ್ದ ಹಾರವಾಡ ಹಾಗೂ ಮುದಗಾ ಭಾಗದ 13 ಮೀನುಗಾರರನ್ನು ನೌಕಾನೆಲೆ ಸಿಬ್ಬಂದಿ ಹಿಡಿದು, ಗ್ರಾಮೀಣ ಠಾಣೆಯ ಪೊಲೀಸರ ವಶಕ್ಕೆ ನೀಡಿದ ಘಟನೆ ಮಂಗಳವಾರ ನಡೆದಿದೆ.

ಅಕ್ರಮ ಪ್ರವೇಶದಡಿ ಮೀನುಗಾರರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಅವರೆಲ್ಲ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ ಎಂದು ಗ್ರಾಮೀಣ ಠಾಣೆ ಸಬ್‌ಇನ್‌ಸ್ಪೆಕ್ಟರ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT