ADVERTISEMENT

ಅಪಘಾತ: ಪಿರಿಯಾಪಟ್ಟಣದ ಮೂವರು ಸಾವು

​ಪ್ರಜಾವಾಣಿ ವಾರ್ತೆ
Published 30 ಮೇ 2015, 10:33 IST
Last Updated 30 ಮೇ 2015, 10:33 IST
-ಸಾಂದರ್ಭಿಕ ಚಿತ್ರ -ಪಿಟಿಐ ಚಿತ್ರ
-ಸಾಂದರ್ಭಿಕ ಚಿತ್ರ -ಪಿಟಿಐ ಚಿತ್ರ   

ಇರೋಡ್(ಪಿಟಿಐ): ತಮಿಳುನಾಡಿನ ಇರೋಡ್ ನಲ್ಲಿ ಸರಕು ಸಾಗಣೆ ಲಾರಿ ಮತ್ತು ಕಾರಿನ ಮಧ್ಯೆ ಶನಿವಾರ ಸಂಭವಿಸಿದ ಅಪಘಾತದಲ್ಲಿ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕೆ. ಸರವಣನ್(37) ಮತ್ತು ಅವರ ಪತ್ನಿ ಹಾಗೂ ಏಳು ವರ್ಷದ ಪುತ್ರಿ ಮೃತ ದುರ್ದೈವಿಗಳು.
ಘಟನಾ ಸ್ಥಳಕ್ಕೆ ತೆರಳಿರುವ ಡಿಎಸ್ ಪಿ ರೆಗಿನಾ ಬೇಗಂ ಅವರು ಮೃತರ ದೇಹಗಳನ್ನು ವಶಕ್ಕೆ ಪಡೆದು, ಶವ ಪರೀಕ್ಷೆಗೆ ಕಳುಹಿಸುವ ವ್ಯವಸ್ಥೆ ಮಾಡಿದ್ದಾರೆ.

ಸರವಣನ್ ಅವರು ಅರೆನಿದ್ರೆಯಲ್ಲಿ ವಾಹನ ಚಾಲನೆ ಮಾಡಿರುವುದೇ ಅಪಘಾತಕ್ಕೆ ಕಾರಣವಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.