ADVERTISEMENT

ಅಭಿವೃದ್ಧಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿ ಪ್ರಕಟ

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2014, 17:53 IST
Last Updated 27 ಅಕ್ಟೋಬರ್ 2014, 17:53 IST

ಬೆಂಗಳೂರು: ರಾಜ್ಯ ಸರ್ಕಾರ ನೀಡುವ ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ.

೨೦೧೨ ನೇ ಸಾಲಿನ ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿಗೆ  ಮೈಸೂರಿನ ಕನ್ನಡ ಪ್ರಭ ಹಿರಿಯ ವಿಶೇಷ ವರದಿಗಾರ ಅಂಶಿ ಪ್ರಸನ್ನಕುಮಾರ್ ಹಾಗೂ ೨೦೧೩ ನೇ ಸಾಲಿನ ಪ್ರಶಸ್ತಿಗೆ ಮಂಗಳೂರು ಆಕಾಶವಾಣಿ ಕಾರ್ಯಕ್ರಮ ನಿರ್ವಾಹಕ ಡಾ, ಸದಾನಂದ ಪೆರ್ಲ ಆಯ್ಕೆಯಾಗಿದ್ದಾರೆ.

ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗೆ ೨೦೧೨ ನೇ ಸಾಲಿನಲ್ಲಿ ದಕ್ಷಿಣ ಕನ್ನಡದ ಪುತ್ತೂರಿನ ಹವ್ಯಾಸಿ ಪತ್ರಕರ್ತ ಡಾ. ನರೇಂದ್ರ ರೈ ದೇರ್ಲ ಹಾಗೂ ೨೦೧೩ ನೇ ಸಾಲಿನಲ್ಲಿ ಸಾಗರದ ವಿಜಯವಾಣಿ ವರದಿಗಾರ ದೀಪಕ್ ಸಾಗರ್ ಅವರು ಆಯ್ಕೆಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.