ಬೆಂಗಳೂರು: ‘ಬಿ.ಎಸ್.ಯಡಿಯೂರಪ್ಪನವರನ್ನು ಅಲ್ಪಾವಧಿಗೆ ಮುಖ್ಯಮಂತ್ರಿ ಮಾಡುವ ಮೂಲಕ, ಅವರು ಪ್ರತಿನಿಧಿಸುವ ಸಮುದಾಯಕ್ಕೇ ನೀವು ಅವಮಾನ ಮಾಡಿದ್ದೀರಿ’ ಎಂದು ನಿಯೋಜಿತ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಕುಟುಕಿದ್ದಾರೆ.
‘ಸರ್ಕಾರ ರಚಿಸಲು ಬಹುಮತ ಇಲ್ಲ ಎಂಬುದು ಗೊತ್ತಿದ್ದರೂ, ಆಳದ ಬಾವಿಗೆ ಮಕ್ಕಳನ್ನು ತಳ್ಳಿದಂತೆ ಯಡಿಯೂರಪ್ಪನವರನ್ನು ಮುಂದೆ ಬಿಟ್ಟು, ಕಡೆಗೆ ಅವರು ರಾಜೀನಾಮೆ ಕೊಡುವಂತೆ ಮಾಡಿದಿರಿ’ ಎಂದು ಟೀಕಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.