ಹೊಸಪೇಟೆ: ವಿಜಯನಗರ ಅರಸರ ಕಾಲದ ಕಾಲುವೆಗಳಿಗೆ ನೀರು ಹರಿಸಲು ಒತ್ತಾಯಿಸಿ ಹೊಸಪೇಟೆಯಲ್ಲಿ ರೈತರು ಶನಿವಾರ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ರೈತರ ಸಂಘದಿಂದ ಹೊಸಪೇಟೆ ಬಂದ್ಗೆ ಕರೆ ನೀಡಲಾಗಿದ್ದು ಅಂಗಡಿ ಮುಂಗಟ್ಟುಗಳು ಮುಚ್ಚಿವೆ. ಪಟ್ಟಣದಲ್ಲಿ ವಾಹನ ಸಂಚಾರ ವಿರಳವಾಗಿದೆ. ಬಹುತೇಖ ಶಾಲಾ ಕಾಲೇಜುಗಳು ತೆರೆದಿಲ್ಲ.
ಸಾರಿಗೆ ಸಂಸ್ಥೆ ಹಾಗೂ ಖಾಸಗಿ ಬಸ್ಗಳು ರಸ್ತೆಗಿಳಿದಿಲ್ಲ. ಹಂಪಿ ನೋಡಲು ಬಂದ ಪ್ರವಾಸಿಗರು ಹೊಸಪೇಟೆಯಿಂದ ಹಂಪಿಗೆ ತೆರಳಲು ಪರದಾಡುತ್ತಿದ್ದಾರೆ.
ಕ್ರಿಮಿನಲ್ ಪ್ರಕರಣ ದಾಖಲು
ಹೊಸಪೇಟೆ ತಹಸೀಲ್ದಾರ್ ಕಚೇರಿಗೆ ಶುಕ್ರವಾರ ಮುತ್ತಿಗೆ ಹಾಕಿ ಕಲ್ಲು ತೂರಾಟ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ ಮತ್ತು ಸರ್ಕಾರಿ ಕೆಲಸ ಕಾರ್ಯಗಳಿಗೆ ಅಡ್ಡಿಪಡಿಸಿದ ಆರೋಪದ ಮೇಲೆ ಹೊಸಪೇಟೆ ನಗರ ಠಾಣೆಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಕಲ್ಲು ತೂರಾಟ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಬಳ್ಳಾರಿ ಜಿಲ್ಲಾಧಿಕಾರಿ ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.