ADVERTISEMENT

‘ಆರೋಪ ಸಾಬೀತುಪಡಿಸಿದರೆ ಯಡಿಯೂರಪ್ಪ ಮನೆಯಲ್ಲಿ ಜೀತ’

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2017, 19:30 IST
Last Updated 20 ಫೆಬ್ರುವರಿ 2017, 19:30 IST

ಬೆಳಗಾವಿ: ‘ಐ.ಟಿ ಅಧಿಕಾರಿಗಳು ದಾಳಿ ನಡೆಸಿದಾಗ ನನ್ನ ಮನೆಯಲ್ಲಿ ₹3.07 ಲಕ್ಷ ನಗದು ಸಿಕ್ಕಿತ್ತು. ಇದಕ್ಕಿಂತ ಒಂದು ರೂಪಾಯಿ ಹೆಚ್ಚು ಸಿಕ್ಕಿರುವುದನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಸಾಬೀತುಪಡಿಸಿದರೆ ಅವರ ಮನೆಯಲ್ಲಿ ನಾನು ಜೀತದಾಳಾಗುತ್ತೇನೆ’ ಎಂದು ಸಚಿವ ರಮೇಶ ಜಾರಕಿಹೊಳಿ ಸೋಮವಾರ ಇಲ್ಲಿ ಸವಾಲು ಹಾಕಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಯಡಿಯೂರಪ್ಪ ನನ್ನ ವಿರುದ್ಧ ಮಾಡಿರುವ ಆರೋಪವನ್ನು ಸಾಬೀತುಪಡಿಸಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಅಲ್ಲದೇ, ಜೀವನ ಪರ್ಯಂತ ಅವರ ಮನೆಯಲ್ಲಿ ಆಳಾಗಿ ದುಡಿಯುತ್ತೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT