ನಾಗಮಂಗಲ: ತಾಲ್ಲೂಕಿನ ಟಿ.ಚೆನ್ನಾಪುರ ಬಳಿಯ ಹಂಚಿನಕೊಪ್ಪಲು ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಬುಧವಾರ ತಮ್ಮ ಇಬ್ಬರು ಹೆಣ್ಣು ಮಕ್ಕಳನ್ನು ನೇಣು ಹಾಕಿ, ನಂತರ ತಾವೂ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಜಯರಾಮ್ (45), ಸೌಭಾಗ್ಯಾ (4), ಹರ್ಷಿಕಾ (2) ಮೃತಪಟ್ಟವರು. ಜಯರಾಮ್ಗೆ ಇಬ್ಬರು ಪತ್ನಿಯರು ಇದ್ದಾರೆ. ಮೊದಲ ಹೆಂಡತಿಗೆ ಇಬ್ಬರು ಗಂಡು ಮಕ್ಕಳಿದ್ದು, ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಮೊದಲ ಹೆಂಡತಿಯಿಂದ ವಿಚ್ಛೇದನ ಪಡೆದು ಎರಡನೇ ಹೆಂಡತಿ ಕಮಲಾ ಜತೆ ವಾಸವಿದ್ದರು. ಎರಡನೇ ಹೆಂಡತಿ ಬಗ್ಗೆ ಅನುಮಾನ ಪಡುತ್ತಿದ್ದ ಜಯರಾಮ್ ಸದಾ ಪತ್ನಿಯೊಂದಿಗೆ ಜಗಳವಾಡುತ್ತಿದ್ದರು. ಬುಧವಾರ ಬೆಳಿಗ್ಗೆ ಮಕ್ಕಳನ್ನು ಕೊಂದು ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಎರಡನೇ ಹೆಂಡತಿ ಕಮಲಾ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.