ADVERTISEMENT

ಉಪವಾಸ ಕೈಬಿಡಲು ಮನವಿ

​ಪ್ರಜಾವಾಣಿ ವಾರ್ತೆ
Published 19 ಜುಲೈ 2017, 19:37 IST
Last Updated 19 ಜುಲೈ 2017, 19:37 IST

ಹುಬ್ಬಳ್ಳಿ: ಮಹದಾಯಿ ನದಿ ನೀರು ಯೋಜನೆ ಜಾರಿಗೆ ಒತ್ತಾಯಿಸಿ ನಡೆಸುತ್ತಿರುವ ಉಪವಾಸ ಸತ್ಯಾಗ್ರಹವನ್ನು ಕೈಬಿಡುವಂತೆ ರೈತ ಸೇನಾ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ವೀರೇಶ ಸೊಬರದಮಠ ಅವರಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಜಗದೀಶ ಶೆಟ್ಟರ್‌ ಬುಧವಾರ ಮನವಿ ಮಾಡಿದರು.

ನರಗುಂದದಿಂದ ಇಲ್ಲಿಗೆ ಬಂದಿದ್ದ ರೈತ ಮುಖಂಡರೊಂದಿಗೆ ಮಾತನಾಡಿದ ಅವರು, ‘ಈ ವಿಷಯವಾಗಿ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಅವರ ಜೊತೆ ಚರ್ಚಿಸುತ್ತೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ  ಗುರುವಾರ ಧಾರವಾಡಕ್ಕೆ ಬರುತ್ತಿದ್ದು, ಅವರು ನರಗುಂದಕ್ಕೆ ತೆರಳಲು ಬಯಸಿದರೆ ಅವರೊಂದಿಗೆ ನಾನೂ ಹೋಗಲು ಸಿದ್ಧ’ ಎಂದರು.

ಎಚ್ಚರಿಕೆ: ‘ನರಗುಂದದಲ್ಲಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಸಮಸ್ಯೆ ಜಟಿಲಗೊಂಡು ಪರಿಸ್ಥಿತಿ ಹದಗೆಟ್ಟರೆ ಸರ್ಕಾರ ಮತ್ತು ವಿರೋಧ ಪಕ್ಷದವರೇ ಅದರ ಹೊಣೆ ಹೊರಬೇಕಾಗುತ್ತದೆ. ಅದಕ್ಕೆ ಅವಕಾಶ ನೀಡದೇ ಸರ್ವಪಕ್ಷಗಳ ನಿಯೋಗವು ಪ್ರಧಾನಿ ಬಳಿ ಹೋಗಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು. ಇಲ್ಲವಾದಲ್ಲಿ ಹೋರಾಟ ತೀವ್ರಗೊಳ್ಳಲಿದೆ’ ಎಂದು ರೈತ ಮುಖಂಡ ಗುರುರಾಯನಗೌಡ ಎಚ್ಚರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.