ADVERTISEMENT

ಎಚ್‌.ಡಿ ಕೋಟೆ ಬಿಜೆಪಿ ಅಭ್ಯರ್ಥಿ ಸಿದ್ದರಾಜು ವಿರುದ್ಧದ ಪ್ರಕರಣ: ಹೈಕೋರ್ಟ್ ಮಧ್ಯಂತರ ಆದೇಶ

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2018, 10:40 IST
Last Updated 25 ಏಪ್ರಿಲ್ 2018, 10:40 IST
ಎಚ್‌.ಡಿ ಕೋಟೆ ಬಿಜೆಪಿ ಅಭ್ಯರ್ಥಿ ಸಿದ್ದರಾಜು ವಿರುದ್ಧದ ಪ್ರಕರಣ: ಹೈಕೋರ್ಟ್ ಮಧ್ಯಂತರ ಆದೇಶ
ಎಚ್‌.ಡಿ ಕೋಟೆ ಬಿಜೆಪಿ ಅಭ್ಯರ್ಥಿ ಸಿದ್ದರಾಜು ವಿರುದ್ಧದ ಪ್ರಕರಣ: ಹೈಕೋರ್ಟ್ ಮಧ್ಯಂತರ ಆದೇಶ   

ಬೆಂಗಳೂರು: ಮೈಸೂರು ಜಿಲ್ಲೆ ಎಚ್‌.ಡಿ ಕೋಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿದ್ದರಾಜು ವಿರುದ್ಧ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಬುಧವಾರ ಮಧ್ಯಂತರ ಆದೇಶ ನೀಡಿದೆ.

‘ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಜು ಪಡೆಯುವ ಯಾವುದೇ ಸೌಲಭ್ಯಗಳು, ಅವರ ಜಾತಿ ಪ್ರಮಾಣ ಪತ್ರದ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಅಂತಿಮ ಆದೇಶಕ್ಕೆ ಒಳಪಟ್ಟಿರುತ್ತದೆ’ ಎಂದು ಹೈಕೋರ್ಟ್ ಮಧ್ಯಂತರ ಆದೇಶದಲ್ಲಿ ಹೇಳಿದೆ.

ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಈ ಕುರಿತಂತೆ ಆದೇಶಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.