ADVERTISEMENT

ಒಂಟಿ ಸಲಗ ದಾಂಧಲೆ

​ಪ್ರಜಾವಾಣಿ ವಾರ್ತೆ
Published 25 ಮೇ 2017, 19:30 IST
Last Updated 25 ಮೇ 2017, 19:30 IST
ಮೈಸೂರು:  ಬಂಡೀಪುರ ರಾಷ್ಟ್ರೀಯ ಉದ್ಯಾನದ ಕಕ್ಕೇಹಳ್ಳದ ಬಳಿ ಒಂಟಿ ಸಲಗ ದಾಂಧಲೆ ನಡೆಸಿದೆ ಎಂಬ ಸುದ್ದಿ ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿದೆ.
 
ಕೆಎಸ್‌ಆರ್‌ಟಿಸಿ ಬಸ್‌ನ್ನು ಅಟ್ಟಿಸಿಕೊಂಡು ಆನೆ ಬಂದಿದ್ದರಿಂದ ಬಸ್‌ ಹಿಮ್ಮುಖವಾಗಿ ಚಲಿಸಿದೆ. ಇದರಿಂದ ಬಸ್ಸಿನ ಗಾಜು ಪುಡಿಯಾಯಿತು.
 
ನಂತರ, ಟೊಮೆಟೊ ತುಂಬಿಕೊಂಡು ಹೋಗುತ್ತಿದ್ದ ಲಾರಿ ಮೇಲೂ ಆನೆ ದಾಳಿ ನಡೆಸಿತು ಎನ್ನಲಾಗಿದೆ. ಆದರೆ, ಈ ಸುದ್ದಿಯನ್ನು ಅರಣ್ಯ ಇಲಾಖೆ ಹಾಗೂ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಖಚಿತಪಡಿಸಿಲ್ಲ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.