ಬೆಂಗಳೂರು: ತಮಿಳುನಾಡಿನಲ್ಲಿ ‘ಜಲ್ಲಿಕಟ್ಟು’ ಕ್ರೀಡೆಯನ್ನು ಬೆಂಬಲಿಸಿ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ ಕರ್ನಾಟಕದ ಗ್ರಾಮೀಣ ಕ್ರೀಡೆ ‘ಕಂಬಳ’ವನ್ನು ಬೆಂಬಲಿಸಿ ಒಗ್ಗಟ್ಟು ಪ್ರದರ್ಶಿಸಬೇಕೆಂದು ನಟ ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.
ರಾಜ್ಯದ ಗ್ರಾಮೀಣ ಕ್ರೀಡೆಯಾಗಿರುವ ಕಂಬಳದ ಪರವಾಗಿ ದನಿಗೂಡಿಸದ ಕನ್ನಡಿಗರ ಕುರಿತು ಜಗ್ಗೇಶ್ ಅಕ್ರೋಶ ವ್ಯಕ್ತಪಡಿಸಿದ್ದಾರೆ. ತಮಿಳರಂತೆ ಕನ್ನಡಿಗರೂ ಕೂಡ ಒಗ್ಗಟ್ಟಿನ ಹೋರಾಟ ನಡೆಸಲು ಸಿದ್ಧರಾಗಬೇಕೆಂದು ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.