ADVERTISEMENT

ಕನ್ನಡ ಅಧ್ಯಯನ ಪೀಠದಲ್ಲಿ ಪಾಂಡವರು!

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2015, 19:30 IST
Last Updated 8 ಅಕ್ಟೋಬರ್ 2015, 19:30 IST

ಮೈಸೂರು: ‘ಧಾರವಾಡದ ಕರ್ನಾಟಕ ವಿ.ವಿ ಕನ್ನಡ ಅಧ್ಯಯನ ಪೀಠದಲ್ಲಿ ನಮ್ಮ ಪ್ರಾಧ್ಯಾಪಕರಿಗೆ ಪಾಂಡವರೆಂದು ಕರೆಯುತ್ತಿದ್ದೆವು. ಅದರಲ್ಲಿ ಡಾ.ಎಂ.ಎಂ. ಕಲಬುರ್ಗಿ ಅವರನ್ನು ಅರ್ಜುನ ಎಂದು, ವೃಷಭೇಂದ್ರಸ್ವಾಮಿ ಅವರನ್ನು ಭೀಮನೆಂದು, ಎಂ.ಎಸ್‌. ಸುಂಕಾಪುರ ಅವರನ್ನು ಧರ್ಮರಾಯ ಎಂದು ಕರೆಯುತ್ತಿದ್ದೆವು. ಆದರೆ, ನಕುಲ–ಸಹದೇವ ಅನೇಕರಿದ್ದರು’ ಎಂದು ಸಾಹಿತಿ, ಇಲ್ಲಿನ ಮೈಸೂರು ವಿವಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಪ್ರಾಧ್ಯಾಪಕ ಅರವಿಂದ ಮಾಲಗತ್ತಿ ನೆನಪು ಮಾಡಿಕೊಂಡರು.

ಇಲ್ಲಿನ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಯುವ ಪ್ರಗತಿಪರ ಚಿಂತಕರ ಸಂಘವು ಗುರುವಾರ ಆಯೋಜಿಸಿದ್ದ ‘ಪ್ರೊ.ಎಂ.ಎಂ. ಕಲಬುರ್ಗಿ ಅವರ ಸಾಹಿತ್ಯ; ವಿಚಾರ ಮಂಥನ’ ಕುರಿತು ವಿಚಾರಸಂಕಿರಣ ಹಾಗೂ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.